ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am