ಬ್ರೇಕಿಂಗ್ ನ್ಯೂಸ್
30-06-26 11:39 am HK News Staffer ಕರಾವಳಿ
ಮಂಗಳೂರು, ಜೂನ್ 30: ಸುರತ್ಕಲ್ ಕಡಲ ತೀರದಿಂದ 33 ನಾಟಿಕಲ್ಸ್ ಮೈಲು ದೂರದ ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಉಡುಪಿ ಮೂಲದ 6 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿ ಮಂಗಳೂರು ಬಂದರಿಗೆ ಕರೆತಂದಿದೆ.
ಜೂನ್ 29ರ ಸಂಜೆ ನಾಲ್ಕು ಗಂಟೆಗೆ ಆಳ ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಅಪಾಯಕ್ಕೆ ಸಿಲುಕಿರುವ ಬಗ್ಗೆ ಇಂಡಿಯನ್ ಕೋಸ್ಟ್ ಗಾರ್ಡ್ ಗೆ ಮಾಹಿತಿ ಬಂದಿತ್ತು. ಕೂಡಲೇ ಅಲ್ಲಿಗೆ ತೆರಳಿದ್ದ ಐಸಿಜಿಎಸ್ ಸಚೇತ್ ಹಡಗಿನ ಮೂಲಕ ಕೋಸ್ಟ್ ಗಾರ್ಡ್ ಪಡೆ ಕಾರ್ಯ ನಡೆಸಿದೆ. ಮೀನುಗಾರರನ್ನು ರಕ್ಷಿಸಿದ ಯೋಧರು ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕರೆತಂದಿದ್ದಾರೆ.


ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಪಾಯಕ್ಕೆ ಈಡಾಗಿತ್ತು. ಅದರಲ್ಲಿದ್ದವರು ತಮ್ಮನ್ನು ಬಚಾವ್ ಮಾಡುವಂತೆ ಸಂದೇಶ ಕಳಿಸಿದ್ದರು. ಬೋಟ್ ತಳಭಾಗಕ್ಕೆ ಹಾನಿಯಾಗಿ ಬೋಟ್ ನೊಳಗೆ ನೀರು ನುಗ್ಗತೊಡಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ICG ಸಚೇತ್ ಕಾರ್ಯಾಚರಣೆಗೆ ಮುಂದಾಗಿತ್ತು.
ಮುಳುಗುತ್ತಿದ್ದ ಮೀನುಗಾರಿಕಾ ಬೋಟನ್ನು ಪತ್ತೆ ಹಚ್ಚಿ 90 ನಿಮಿಷಗಳ ಕಾಲ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆ ರಿಮೋಟ್ ಆಪರೇಟೆಡ್ ಲೈಫ್ ಬಾಯ್ಸ್ ಗಳನ್ನು ಬಳಸಿ ರಕ್ಷಣಾ ಕಾರ್ಯ ನಡೆಸಿ, ಮೀನುಗಾರರನ್ನು ರಕ್ಷಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm