ಬ್ರೇಕಿಂಗ್ ನ್ಯೂಸ್
01-07-26 09:18 pm HK News Desk ಕರಾವಳಿ
ಮಂಗಳೂರು, ಜುಲೈ 1 ಪ್ರಕೃತಿ ವಿಕೋಪ ಯಾವಾಗ ಹೇಗೆ ಆಗುತ್ತೆ ಗೊತ್ತಿಲ್ಲ. ರಾತ್ರೋರಾತ್ರಿ ಘಟನೆಯಾದಾಗ ಊರವರು ಪೊಲೀಸ್ ಅಧಿಕಾರಿಗಳು ರಕ್ಷಣೆ ಕಾರ್ಯ ಮಾಡುತ್ತಾರೆ. ಆದರೆ ಇಂತಹ ಡೇಂಜರ್ ಪ್ರದೇಶಗಳಿದ್ದರೆ ಮೊದಲೇ ಜಿಲ್ಲಾಡಳಿತಕ್ಕೆ ತಿಳಿಸಿದರೆ ಕ್ರಮ ಜರುಗಿಸಲಾಗುವುದು. ಇದಕ್ಕಾಗಿ ಜನರೇ ಜಾಗೃತರಾಗಬೇಕಾಗಿದೆ ಎಂದು ನಾಗುರಿಯಲ್ಲಿ ಮನೆ ಕುಸಿತ ದುರಂತದ ಬಗ್ಗೆ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಕಂಕನಾಡಿ ನಾಗುರಿಯಲ್ಲಿ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ ಘಟನಾ ಸ್ಥಳಕ್ಕೆ ಸಚಿವ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಘಟನೆಯಲ್ಲಿ ಗಾಯಗೊಂಡವರಿಗೆ ಜಿಲ್ಲಾಡಳಿತ ವತಿಯಿಂದ ವೈದ್ಯಕೀಯ ಚಿಕಿತ್ಸೆ ನೀಡುತ್ತೇವೆ. ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.
ಮಳೆ ಈಗಷ್ಟೇ ಪ್ರಾರಂಭವಾಗಿದ್ದು ಮಾತ್ರ. ಅಷ್ಟರಲ್ಲೇ ದೊಡ್ಡ ದುರಂತ ಸಂಭವಿಸಿದೆ. ಇದು ನಮ್ಮೆಲ್ಲರಿಗೂ ಎಚ್ಚರಿಕೆಯ ಕರೆ ಗಂಟೆ. ಅದರಲ್ಲೂ ಮಂಗಳೂರು ಎತ್ತರ ತಗ್ಗು ಪ್ರದೇಶವಾಗಿದ್ದು ಈ ವಿಚಾರದಲ್ಲಿ ಜನರೇ ಸ್ವಯಂ ಜಾಗೃತರಾಗಬೇಕು. ಅಧಿಕಾರಿಗಳು ಆದಷ್ಟು ಅಪಾಯಕಾರಿ ಪ್ರದೇಶಕ್ಕೆ ಭೇಟಿ ನೀಡಿ ಜನರಿಗೆ ಎಚ್ಚರಿಕೆಗಳನ್ನು ನೀಡುತ್ತಾರೆ. ಆದರೆ ಇಂತಹ ಅಪಾಯಗಳ ಬಗ್ಗೆ ಜನರು ಸ್ವಯಂಪ್ರೇರಿತರಾಗಿಯೇ ಜಾಗರೂಕರಾಗಬೇಕು.





ಸರಕಾರಿ ಜಾಗದಲ್ಲಿ ಅಪಾಯಕಾರಿ ಸ್ಥಿತಿ ಇದ್ರೆ ಜನರು ಗಮನಕ್ಕೆ ತರಬೇಕು, ಅದನ್ನು ಸರಿ ಮಾಡಿಕೊಡುತ್ತೇವೆ. ಆದರೆ ಖಾಸಗಿ ಜಾಗದಲ್ಲಿ ಈ ರೀತಿ ಕಾಂಪೌಂಡ್ ಕುಸಿದಾಗ ನಮಗೇನು ಮಾಡೋದಕ್ಕೆ ಆಗಲ್ಲ. ಮನೆ ದುರಸ್ತಿ ನಿಟ್ಟಿನಲ್ಲಿ ಇಲ್ಲಿ ಮನೆ ಮಾಲೀಕರಿದ್ದಾರೆ. ಹಾಗಾಗಿ ನೇರ ಸಂತ್ರಸ್ತರಿಗೆ ಪರಿಹಾರ ನೀಡುವ ವಿಷಯ ಬರೋದಿಲ್ಲ. ಮನೆ ಮಾಲೀಕರಿಗೆ ದುರಸ್ತಿ ಮಾಡಲು ಬೇಕಿದ್ದರೆ ಪರಿಹಾರ ಕೊಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಸಚಿವ ಖಾದರ್ ಉತ್ತರಿಸಿದರು.
ಮಂಗಳೂರಿನ ಈ ಘಟನೆ ಇಡೀ ಕರಾವಳಿಗೆ ಸಂದೇಶವಾಗಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಡೇಂಜರ್ ಇದೆ ಅಂದ್ರೆ ದೂರ ನಿಂತು ಸರಕಾರಕ್ಕೆ ತಿಳಿಸಬೇಕು. ಏನೇ ವ್ಯವಸ್ಥೆ ಇದ್ರೂ ಪ್ರಕೃತಿ ವಿಕೋಪ ಆದಾಗ ಏನೂ ಮಾಡೋಕೆ ಆಗಲ್ಲ. ಏನೂ ಆಗಬಾರದು ಅನ್ನೋದೇ ನಮ್ಮ ಪ್ರಾರ್ಥನೆ ಎಂದು ಹೇಳಿದ ಖಾದರ್, ತೊಕ್ಕೊಟ್ಟು ತಡೆಗೋಡೆ ಕುಸಿದ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಖಾಸಗಿಯವರು ಕಟ್ಟಿದ ಕಟ್ಟಡದಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಅದಕ್ಕೆ ಅವರೇ ಹೊಣೆ ಆಗುತ್ತಾರೆ. ಈ ಬಗ್ಗೆ ಕ್ರಮ ಜರುಗಿಸಲು ಕಂದಾಯ ಸಚಿವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm