ಬ್ರೇಕಿಂಗ್ ನ್ಯೂಸ್
12-08-20 06:24 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 12: ಉಳ್ಳಾಲ ಕೋಟೆಪುರದ ಕಡಲತೀರದಲ್ಲಿ ರಾತ್ರೋರಾತ್ರಿ ಮರಳು ಕಳ್ಳತನ ನಡೆಯುತ್ತಿದ್ದು ಪೊಲೀಸರ ಬೆಂಬಲದಿಂದಲೇ ಕೃತ್ಯ ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಪ್ರತಿ ದಿನ ರಾತ್ರಿ ಈ ಕೃತ್ಯ ನಡೆಯುತ್ತಿದ್ದು ಜೆಸಿಬಿಯಲ್ಲಿ ಮರಳನ್ನು ಎತ್ತಿ ಟಿಪ್ಪರ್, ಪಿಕ್ ಅಪ್ ವಾಹನಗಳಿಗೆ ತುಂಬಿಸಿ ಸಾಗಿಸಲಾಗುತ್ತಿದೆ. ಇಂದು ಮುಂಜಾನೆ ಹೀಗೆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ಉಳ್ಳಾಲ ಶಾರದಾ ನಿಕೇತನ ಬಳಿ ಪಲ್ಟಿಯಾಗಿದೆ. ಆದರೆ, ಪಲ್ಟಿ ಹೊಡೆದಿದ್ದ ಪಿಕಪ್ ವಾಹನವನ್ನು ಮರಳನ್ನು ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗುವಂತೆ ಪೊಲೀಸರೇ ಸಹಕರಿಸಿದ್ದಾರೆ. ಮಾಧ್ಯಮದ ವ್ಯಕ್ತಿಯೊಬ್ವರು ಅಲ್ಲಿಗೆ ತೆರಳಿದಾಗ, ಪಿಸಿಆರ್ ವಾಹನ ಅಲ್ಲಿಯೇ ಇತ್ತಾದರೂ, ಕ್ರಮಕ್ಕೆ ಮುಂದಾಗಿಲ್ಲ.
ಪ್ರತಿ ದಿನ ನಸುಕಿನ ವೇಳೆಯಲ್ಲಿ ಉಳ್ಳಾಲ ಕೋಟೆಪುರ, ಕೋಡಿ ಸಮುದ್ರ ತೀರದ ಮರಳನ್ನು ಎತ್ತಲಾಗುತ್ತಿದ್ದು ಅಕ್ರಮ ದಂಧೆ ರಾಜಾರೋಷವಾಗಿ ಒಂದು ತಿಂಗಳಿನಿಂದಲೂ ನಡೀತಿದೆ. ಕೋಟೆಪುರದ ವ್ಯಕ್ತಿಯೋರ್ವ ಈ ಮರಳು ಧಂದೆಯ ಕಿಂಗ್ ಪಿನ್ ಆಗಿದ್ದು, ಅಕ್ರಮ ಮರಳು ಸಾಗುವ ರಸ್ತೆಯುದ್ಧಕ್ಕೂ ಎಸ್ಕಾರ್ಟ್ ಮಾಡಲು ಅನೇಕ ಯುವಕರನ್ನು ನೇಮಿಸಿದ್ದಾನೆ.

ಠಾಣೆಯ ಹಳೆಬೇರುಗಳು ಧಂದೆಯಲ್ಲಿ ಭಾಗಿ !
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕಳೆದ ಏಳೆಂಟು ವರ್ಷಗಳಿಂದ ಬೇರೂರಿರುವ ದ.ಕ .ಜಿಲ್ಲೆಯ ಮೂಲದ ಪೊಲೀಸರೇ ಈ ಅಕ್ರಮ ಮರಳು ಧಂದೆಗೆ ಬೆಂಬಲವಾಗಿ ನಿಂತಿದ್ದಾರೆಂಬ ಆರೋಪವನ್ನು ಸ್ಥಳೀಯರು ಮಾಡಿದ್ದಾರೆ. ಅಕ್ರಮ ಮರಳು ಸಾಗಾಟದ ವಾಹನಗಳು ಪೊಲೀಸ್ ಠಾಣೆಯ ದಾರಿ ತಪ್ಪಿಸಿ ಕೋಟೆಪುರ -ಲಕ್ಷ್ಮೀ ನರಸಿಂಹ ದೇವಸ್ಥಾನ- ಬಸ್ತಿಪಡ್ಪು-ಮೇಲಂಗಡಿ, ದರ್ಗಾ ಮಾರ್ಗವಾಗಿ ಮಾಸ್ತಿಕಟ್ಟೆಗೆ ತಲುಪುತ್ತಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಸಿ.ಸಿ. ಕ್ಯಾಮೆರಾ ಪರಿಶೀಲಿಸಿ ಸಮರ್ಪಕ ತನಿಖೆ ನಡೆಸಿದ್ದಲ್ಲಿ ಅಕ್ರಮ ಬಯಲಿಗೆ ಬರಬಹುದು. ಜೊತೆಗೆ ದಂಧೆಕೋರರಿಗೆ ಕುಮ್ಮಕ್ಕು ನೀಡುತ್ತಿರುವ ಉಳ್ಳಾಲ ಠಾಣೆಯ ಹಳೆಬೇರುಗಳ ಬಂಡವಾಳವೂ ಬಯಲಾಗಬಹುದು. ಸಿಆರ್ ಝಡ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಮರಳು ತೆಗೆಯುವಂತಿಲ್ಲ ಎಂಬ ನಿಯಮವನ್ನು ಪೊಲೀಸರ ಬೆಂಬಲದಲ್ಲಿಯೇ ಗಾಳಿಗೆ ತೂರುತ್ತಿರುವುದು ಸ್ಥಳೀಯ ಶಾಸಕರಿಗೆ ಮತ್ತು ಗಣಿ ಇಲಾಖೆಗೂ ಗೊತ್ತಿಲ್ಲದ ವಿಷಯವೇನಲ್ಲ. ಆದರೆ, ಅಕ್ರಮ ದಂಧೆ ಎನ್ನುವುದು ಎಲ್ಲವನ್ನೂ ಒಳಗೊಂಡೇ ನಡೀತಿದ್ಯಾ ಅನ್ನೋ ಸಂಶಯ ಜನರದ್ದು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm