ಬ್ರೇಕಿಂಗ್ ನ್ಯೂಸ್
02-07-26 10:53 pm HK News Desk ಕರಾವಳಿ
ಉಳ್ಳಾಲ, ಜು.02 ಭಾರೀ ಮಳೆಗೆ ತೊಕ್ಕೊಟ್ಟು ಸಮೀಪದ ಕೆರೆಬೈಲ್ ಎಂಬಲ್ಲಿ ಖಾಸಗಿ ಎಸ್ಟೇಟ್ ಆವರಣ ಗೋಡೆ ಕುಸಿದ ಪರಿಣಾಮ ಒಂದು ಮನೆ ನೆಲಸಮವಾಗಿದ್ದು, ಸ್ಥಳದಲ್ಲಿ ಹದಿನಾಲ್ಕು ಮನೆಗಳು ಅಪಾಯದಲ್ಲಿವೆ. ಸಂತ್ರಸ್ತ ಕುಟುಂಬಗಳಿಗೆ ಸ್ಥಳೀಯ ಶಾಸಕ ಮತ್ತು ಆರೋಗ್ಯ ಸಚಿವ ಯು.ಟಿ.ಖಾದರ್ ತಲಾ ಹತ್ತು ಸಾವಿರ ರೂ. ವೈಯಕ್ತಿಕ ಸಹಾಯಧನ ನೀಡಿದ್ದಾರೆ.
ಬುಧವಾರ ಸಂಜೆ ಸಚಿವ ಖಾದರ್ ಅವರು ಜಿಲ್ಲಾಧಿಕಾರಿಗಳ ಜತೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಎಸ್ಟೇಟ್ ಮಾಲಕರು ನೀಡುತ್ತಿರುವ ಉಪಟಳಗಳ ಬಗ್ಗೆ ಸ್ಥಳೀಯರು ಸಚಿವರಲ್ಲಿ ದೂರುಗಳ ಸರಮಾಲೆಯನ್ನೇ ಹೇಳಿದ್ದರು. ಹೀಗಾಗಿ ಹದಿನಾಲ್ಕು ಮನೆಗಳ ಕುಟುಂಬ ಸದಸ್ಯರನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದರು. ಸಂತ್ರಸ್ತ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಒಂದು ತಿಂಗಳ ಮನೆ ಬಾಡಿಗೆ ಮತ್ತು ತಲಾ ಹತ್ತು ಸಾವಿರ ರೂ. ಸಹಾಯಧನ ನೀಡುವುದಾಗಿ ಖಾದರ್ ಘೋಷಿಸಿದ್ದರು.
ಇದರಂತೆ, ಎನ್ಎಸ್ಯುಐ ಕ್ಷೇತ್ರ ಕಾರ್ಯದರ್ಶಿ ಯು.ಟಿ.ಫರೀದ್ ಗುರುವಾರ ಬೆಳಗ್ಗೆಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹದಿನಾಲ್ಕು ಮನೆಗಳ ಸಂತ್ರಸ್ತ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂ. ಸಹಾಯಧನ ವಿತರಿಸಿದ್ದಾರೆ. ಈ ವೇಳೆ ಮಾತನಾಡಿದ ಫರೀದ್ ಅವರು ಈಗಾಗಲೇ ಘಟನೆ ಕುರಿತು ಜಿಲ್ಲಾಧಿಕಾರಿಯವರ ಜೊತೆ ಚರ್ಚಿಸಲಾಗಿದ್ದು, ಸಂತ್ರಸ್ತರಿಗೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸುವ ಪ್ರಯತ್ನಗಳಾಗುತ್ತಿವೆ. ಎಸ್ಟೇಟ್ ತಡೆಗೋಡೆಯ ಸುರಕ್ಷತೆಯ ಬಗ್ಗೆ ಎನ್ಐಟಿಕೆ ಇಂಜಿನಿಯರ್ಗಳು ವರದಿ ನೀಡಿದ ಬಳಿಕವಷ್ಟೇ ಸಂತ್ರಸ್ತರು ಮತ್ತೆ ತಮ್ಮ ಮನೆಗಳಿಗೆ ಮರಳಬಹುದೆಂದರು.





ಸಚಿವ ಖಾದರ್ ಆಪ್ತ ಸಹಾಯಕ ಪ್ರಕಾಶ್ ಪಿಂಟೋ ಮಾತನಾಡಿ ಸಚಿವರು ಬುಧವಾರ ರಾತ್ರಿಯೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಸಂತ್ರಸ್ತ ಹದಿನಾಲ್ಕು ಕುಟುಂಬಗಳಿಗೆ ಉತ್ತಮ ವಸತಿ ವ್ಯವಸ್ಥೆ ಮಾಡಿಕೊಟ್ಟು, ಘಟನೆಗೆ ಕಾರಣರಾದ ಎಸ್ಟೇಟ್ ಮಾಲಕರಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅನುಮತಿ ಇಲ್ಲದೆ ಆವರಣ ಗೋಡೆ ನಿರ್ಮಿಸಲು ಅವಕಾಶ ಕೊಟ್ಟ ಉಳ್ಳಾಲ ನಗರಸಭೆಯ ಇಂಜಿನಿಯರ್ ತುಳಸಿಯ ವಿರುದ್ಧ ಕ್ರಮ ಜರುಗಲಿದ್ದು, ಅವರು ಅಮಾನತುಗೊಳ್ಳುವ ಸಾಧ್ಯತೆಯಿದೆಯೆಂದರು.
ಬಿಜೆಪಿ ಮಹಾಶಕ್ತಿ ಕೇಂದ್ರದ ನಾರಾಯಣ ಬಿ ಮಾತನಾಡಿ ವರುಷದ ಹಿಂದೆಯೇ ಆವರಣ ಗೋಡೆ ವಾಲಿ ನಿಂತಿದ್ದರೂ ಸಹ ದೀರ್ಘ ಅವಧಿಯಲ್ಲಿ ಖಾಸಗಿ ಎಸ್ಟೇಟ್ ಮಾಲಕರು ಯಾವುದೇ ಮುಂಜಾಗ್ರತಾ ಕ್ರಮ ವಹಿಸಿಲ್ಲ. ಮೊದಲ ಮಳೆಯಲ್ಲೇ ಈ ರೀತಿ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲಾಧಿಕಾರಿಯವರೇ ಇಲ್ಲಿನ ಪರಿಸ್ಥಿತಿಯನ್ನ ಕಂಡು ದಂಗಾಗಿದ್ದಾರೆ. ಮನೆಯನ್ನ ಕಳಕೊಂಡ ಕಿಶೋರ್ ಅವರಿಗೆ ಪುನರ್ವಸತಿ ಕಲ್ಪಿಸಿ, ಆವರಣ ಗೋಡೆಯನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕೆಂದು ಆಗ್ರಹಿಸಿದರು.
ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷ ಸಫ್ವಾನ್ ಕೆರೆಬೈಲ್, ಉಳ್ಳಾಲ ನಗರಸಭೆ ಮಾಜಿ ಕೌನ್ಸಿಲರ್ ರಾಜೇಶ್ ಯು.ಬಿ ಮೊದಲಾದವರು ಉಪಸ್ಥಿತರಿದ್ದರು.
02-07-26 09:19 pm
HK News Staffer
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
02-07-26 10:09 pm
HK News Staffer
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm
ಕಾಸರಗೋಡು ; ಶಾಲಾ ಮೈದಾನದಲ್ಲಿ ಕಾರ್ ರೇಸಿಂಗ್, ತಡೆ...
02-07-26 04:21 pm
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm