ಬ್ರೇಕಿಂಗ್ ನ್ಯೂಸ್
03-07-26 10:17 pm HK News Staffer ಕರಾವಳಿ
ಮಂಗಳೂರು, ಜುಲೈ 3: ನಗರದ ಕುಳೂರು ಬಳಿಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹಳೆಯಂಗಡಿ ಬಳಿಯ ತೋಕೂರು ನಿವಾಸಿ ಸದಾಶಿವ ಶೆಟ್ಟಿಗಾರ್(46) ಮೃತರು. ಇವರು ವೃತ್ತಿಯಲ್ಲಿ ಇನ್ಸೂರೆನ್ಸ್ ಏಜಂಟ್ ಆಗಿದ್ದು ಮಂಗಳೂರಿಗೆ ಕಾರ್ಯ ನಿಮಿತ್ತ ಬಂದು ಸಂಜೆ ವೇಳೆಗೆ ಮನೆಯತ್ತ ತೆರಳುತ್ತಿದ್ದರು. ಭಾರೀ ಮಳೆಯ ನಡುವೆ ಟ್ರಾಫಿಕ್ ದಟ್ಟಣೆ ಇರುವಾಗಲೇ ಕುಳೂರು ವಿಆರ್ ಎಲ್ ಕಚೇರಿ ಮುಂಭಾಗದಲ್ಲಿ ಅಪಘಾತ ನಡೆದಿದೆ.
ಸ್ಕೂಟರ್ ಸವಾರ ಟ್ಯಾಂಕರ್ ಎಡ ಬದಿಯಿಂದ ಚಲಿಸುತ್ತಿದ್ದಾಗ ತಾಗಿದ್ದೋ, ಸ್ಕೂಟರ್ ಹಿಂದಿನಿಂದಲೇ ಟ್ಯಾಂಕರ್ ಡಿಕ್ಕಿ ಆಗಿದೆಯೇ ಎನ್ನುವುದು ಪೊಲೀಸರಿಗೂ ದೃಢವಾಗಿಲ್ಲ. ಲಾರಿ ಚಾಲಕ ಮಹಮ್ಮದ್ ಅಜರುದ್ದೀನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸ್ಕೂಟರ್ ರಸ್ತೆಯಿಂದ ಹೊರಕ್ಕೆ ಎಡಬದಿಗೆ ಬಿದ್ದಿದ್ದು ಸವಾರನ ತಲೆ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮಳೆಯಿಂದಾಗಿ ರಸ್ತೆ ಕಾಣುತ್ತಿರಲಿಲ್ಲ, ಎಡ ಬದಿಗಿದ್ದ ಸ್ಕೂಟರ್ ಕೂಡ ಕಾಣುತ್ತಿರಲಿಲ್ಲ ಎಂದು ಲಾರಿ ಚಾಲಕ ಪೊಲೀಸರಲ್ಲಿ ತಿಳಿಸಿದ್ದಾನೆ. ಬಸ್, ಟ್ಯಾಂಕರ್, ಲಾರಿ ಇನ್ನಿತರ ಯಾವುದೇ ಘನ ವಾಹನಗಳ ಎಡ ಬದಿಯಿಂದ ಓವರ್ ಟೇಕ್ ಆಗಲೀ, ಟ್ರಾಫಿಕ್ ನಲ್ಲಿ ಸಂಚರಿಸುವಾಗಲೂ ಜಾಗ್ರತೆ ಇರಬೇಕಾಗುತ್ತದೆ. ದೊಡ್ಡ ವಾಹನಗಳ ಚಾಲಕರಿಗೆ ಎಡ ಬದಿ ಇರುವ ಸಣ್ಣ ವಾಹನಗಳು ಕಾಣದೆ ಅಪಘಾತಕ್ಕೆ ಕಾರಣವಾಗುತ್ತದೆ. ಹೀಗಾಗಿ ಹೆದ್ದಾರಿಯಲ್ಲಿ ಸಂಚರಿಸುವಾಗ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm