ಬ್ರೇಕಿಂಗ್ ನ್ಯೂಸ್
05-07-26 10:15 pm HK News Desk ಕರಾವಳಿ
ಉಳ್ಳಾಲ, ಜು.05: ಉದ್ಯೋಗ, ವ್ಯವಹಾರದಲ್ಲಿ ನಾವು ಎಷ್ಟೇ ಯಶಸ್ಸು ಸಾಧಿಸಿದರೂ ಜೀವನದಲ್ಲಿ ನಿರಂತರವಾಗಿ ಧರ್ಮ ಕಾರ್ಯಗಳನ್ನ ನಡೆಸಬೇಕಿದೆ. ರಾಘವ ಗಟ್ಟಿ ಮತ್ತು ಭಾರತಿ ದಂಪತಿ ವ್ಯವಹಾರದ ಜೊತೆಗೆ ಜೀವನದಲ್ಲಿ ಧರ್ಮ ಕಾರ್ಯಗಳ ಅನುಷ್ಠಾನಗೊಳಿಸಿರುವುದರ ಫಲವಾಗಿ ಅವರಿಂದು ಯಶಸ್ವಿ ಉದ್ಯಮಿಗಳಾಗಿ ಸಮಾಜಕ್ಕೆ ಆದರ್ಶರಾಗಿದ್ದಾರೆಂದು ಮಾಡೂರು ಮರಿಯಣ್ಣ ಪಾಲು ಶಿವದುರ್ಗಾಂಬ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರಿನಲ್ಲಿ ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಭಾರತಿ ಮತ್ತು ಹಾಲಿ ಪಟ್ಟಣ ಪಂಚಾಯತ್ ಸದಸ್ಯರಾದ ರಾಘವ ಗಟ್ಟಿ ದಂಪತಿ ಮಾಲಕತ್ವದ ಆರ್.ಬಿ ಕಾಂಪ್ಲೆಕ್ಸನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿದರು.




ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ ಕೋಟೆಕಾರಿನಲ್ಲಿ ತಲೆಯೆತ್ತಿರುವ ಈ ವಾಣಿಜ್ಯ ಕಟ್ಟಡದಿಂದ ನಾಗರಿಕ ಸಮಾಜಕ್ಕೆ ಲಾಭ ದೊರೆಯುವಂತಾಗಲಿ. ನೂತನ ಕಟ್ಟಡದಲ್ಲಿ ನಡೆಯುವ ಎಲ್ಲಾ ವಾಣಿಜ್ಯ ವ್ಯವಹಾರಗಳೂ ಯಶಸ್ವಿಯಾಗಲಿಯೆಂದು ಶುಭ ಹಾರೈಸಿದರು. ತುಳುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ ನೂತನ ವಾಣಿಜ್ಯ ಕಟ್ಟಡ ನಿರ್ಮಾಣದಿಂದ ಪ್ರದೇಶದಲ್ಲಿ ಆರ್ಥಿಕ ಚಲನವಲನ ನಡೆಯುವ ಮೂಲಕ ಕೋಟೆಕಾರು ಪಟ್ಟಣದ ಅಭಿವೃದ್ಧಿಗೂ ಸಹಕಾರಿಯಾಗಲಿದೆಯೆಂದರು.
ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಗುತ್ತಿಗೆದಾರ ಪುರುಷೋತ್ತಮ ಗಟ್ಟಿ ಪರ್ಯತ್ತೂರು ಹಾಗೂ ಇತರರನ್ನ ಸನ್ಮಾನಿಸಲಾಯಿತು. ಕೋಟೆಕಾರು ಶೃಂಗೇರಿ ಶಾಖಾ ಮಠದ ಧರ್ಮಾಧಿಕಾರಿಗಳಾದ ಸತ್ಯಶಂಕರ ಬೊಳ್ಳಾವ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು, ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಸತೀಶ್ ಶೆಟ್ಟಿ, ಸೋಮೇಶ್ವರ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರು, ಬಿಜೆಪಿ ಹಿರಿಯ ಮುಖಂಡರಾದ ಚಂದ್ರಶೇಖರ ಉಚ್ಚಿಲ್, ಕಟ್ಟಡ ಮಾಲಕರಾದ ರಾಘವ ಗಟ್ಟಿ ಮತ್ತು ಭಾರತಿ ದಂಪತಿ ಮೊದಲಾದವರು ಉಪಸ್ಥಿತರಿದ್ದರು. ರೈಲ್ವೇ ಸಲಹಾ ಸಮಿತಿ ಸದಸ್ಯರಾದ ಗೋಪಿನಾಥ್ ಬಗಂಬಿಲ ಸ್ವಾಗತಿಸಿದರು. ವಿಜೆ ಹರಿಪ್ರಸಾದ್ ನಿರೂಪಿಸಿದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm