ಬ್ರೇಕಿಂಗ್ ನ್ಯೂಸ್
15-07-26 09:03 pm HK News Staffer ಕರಾವಳಿ
ಮಂಗಳೂರು, ಜುಲೈ 15: ಬಾಂಗ್ಲಾದೇಶಿ ನಿವಾಸಿಗಳು ಎಲ್ಲಿಯಾದರೂ ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ಕೊಟ್ಟು ತನಿಖೆ ಮಾಡಿಸಲು ಸ್ವತಂತ್ರರಿದ್ದಾರೆ. ಹಾಗಂತ, ತಾವಾಗಿಯೇ ತನಿಖೆ ಮಾಡಲು ಹೋದರೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಎಚ್ಚರಿಸಿದ್ದಾರೆ.
ಬಾಂಗ್ಲಾನ್ನರ ಪತ್ತೆ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಪೊಲೀಸ್ ಕಮಿಷನರ್, ಬಾಂಗ್ಲಾನ್ನರು ಅನ್ನುವ ಶಂಕೆಯಲ್ಲಿ ಪರಿಶೀಲನೆ ಕೈಗೊಳ್ಳಲು ಪೊಲೀಸರಿಗೆ ಮಾತ್ರ ಅಧಿಕಾರ ಇದೆ. ಅವರನ್ನು ವಶಕ್ಕೆ ಪಡೆದು ಗಡೀಪಾರು ಮಾಡುವ ಅಧಿಕಾರವನ್ನೂ ಪೊಲೀಸ್ ಇಲಾಖೆ ಹೊಂದಿದೆ. ಆದರೆ ಬಾಂಗ್ಲಾದೇಶಿ ನಿವಾಸಿಗಳು ಅನ್ನುವ ಗುಮಾನಿಯಲ್ಲಿ ಯಾರಾದ್ರೂ ಪೊಲೀಸರ ಕೆಲಸ ಮಾಡಲು ಹೋದರೆ ಕಾನೂನು ಕ್ರಮಕ್ಕೆ ಸಿಲುಕಬೇಕಾಗುತ್ತದೆ. ಆ ರೀತಿ ಮಾಡುವುದು ಕಲಂ 341 ಮತ್ತು 506 ಪ್ರಕಾರ ಅಪರಾಧವಾಗುತ್ತದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಇದೇ ರೀತಿ ಕೆಲವರು ಬಾಂಗ್ಲಾನ್ನರು ಅನ್ನುವ ಶಂಕೆಯಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ವಿಚಾರಣೆ ಮಾಡಲು ಹೋಗಿ ಜೈಲು ಸೇರುವ ಸ್ಥಿತಿಯಾಗಿತ್ತು ಎಂದು ಉಲ್ಲೇಖಿಸಿರುವ ಕಮಿಷನರ್, ಯಾರನ್ನೇ ಆಗಲಿ ಗುರುತಿನ ಕಾರ್ಡ್ ತೋರಿಸುವಂತೆ ಪೀಡಿಸುವುದು ಆತನ ಖಾಸಗಿತನದ ಹಕ್ಕಿನ ಉಲ್ಲಂಘನೆ ಆಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ನಾವು ದಾಳಿ ಮಾಡುತ್ತೇವೆಂದು ಹೇಳಿಕೊಂಡು ಯಾರಾದ್ರೂ ಕಾನೂನು ಕೈಗೆತ್ತಿಕೊಂಡರೆ ಬಂಧಿಸಿ ಕ್ರಮ ಜರುಗಿಸಲಾಗುವುದು. ವಲಸಿಗರು ಅನ್ನುವ ನೆಪದಲ್ಲಿ ಪರಿಶೀಲಿಸುವ ಅಧಿಕಾರ ಇದೆಯೇ, ಇಲ್ಲವೇ ಎಂಬುದನ್ನು ಆನಂತರ ಕೋರ್ಟಿನಲ್ಲಿ ತೋರಿಸಿಕೊಳ್ಳಬೇಕಷ್ಟೇ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಹಿಂದು ಸಂಘಟನೆ ಪರ ಮುಖಂಡ ಪುನೀತ್ ಕೆರೆಹಳ್ಳಿ ಎಂಬವರು ಮಂಗಳೂರಿನಲ್ಲಿ ಬಾಂಗ್ಲಾನ್ನರ ಮೇಲೆ ದಾಳಿ ಮಾಡುತ್ತೇವೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಯಾರದ್ದೇ ಹೆಸರೆತ್ತದೆ ವಾರ್ನಿಂಗ್ ಮಾಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:03 pm
HK News Staffer
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm