ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್ಕೆ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ

17-07-26 03:55 pm       HK News Staffer   ಕರಾವಳಿ

ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಮೀನುಗಾರಿಕಾ ಬೋಟ್ ಪಲ್ಟಿಯಾಗಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಮಂಗಳೂರು, ಜುಲೈ 17: ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಮೀನುಗಾರಿಕಾ ಬೋಟ್ ಪಲ್ಟಿಯಾಗಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. 

ಸುರತ್ಕಲ್ ನ ಎನ‌್ ಐಟಿಕೆ ಬೀಚ್ ಬಳಿ ಸಾಗುತ್ತಿದ್ದಾಗ ಭಾರೀ ಗಾಳಿಗೆ ನಾಡದೋಣಿ ಪಲ್ಟಿಯಾಗಿ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಆಂಧ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ಸೇರಿ ರಕ್ಷಣೆ ಮಾಡಿದ್ದಾರೆ.‌

ನಾಡದೋಣಿಯಲ್ಲಿ ಇವರು ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿದ್ದರು. ಭಾರೀ ಗಾಳಿ ಮತ್ತು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಸಮುದ್ರಕ್ಕೆ ಬಿದ್ದು ಅಪಾಯದಲ್ಲಿ ಸಿಲುಕಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರು ಸೇರಿ ರಕ್ಷಣೆ ಮಾಡಿದ್ದಾರೆ.