ಬ್ರೇಕಿಂಗ್ ನ್ಯೂಸ್
17-07-26 07:58 pm HK News Staffer ಕರಾವಳಿ
ಮಂಗಳೂರು, ಜುಲೈ 17: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 19 ಬಾಂಗ್ಲಾ ಪ್ರಜೆಗಳ ಬಂಧನವಾಗಿದ್ದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ಇಲಾಖೆಗೆ ಸಮಸ್ತ ಸಾರ್ವಜನಿಕರ ಪರವಾಗಿ ಅಭಿನಂದನೆಗಳು. ಆದರೆ ಕಾಂಗ್ರೆಸ್ ಸರ್ಕಾರ ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ(ಪಿಆರ್ ಸಿ) ಜಾರಿಗೆ ತರುತ್ತಿರುವುದು ಬಾಂಗ್ಲಾ ನಿವಾಸಿಗಳಿಗೆ ವರದಾನವಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಬಾಂಗ್ಲಾದೇಶಿ ನಿವಾಸಿಗಳ ಪತ್ತೆ ಕಾರ್ಯ ಸಂಪೂರ್ಣವಾಗಿ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಾಗಿದ್ದು, ಎಳ್ಳಷ್ಟೂ ರಾಜ್ಯ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಹೇಳಿರುವ ಕಾಮತ್, ಆದರೆ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿರುವಾಗ ಕಾಂಗ್ರೆಸ್ ಸರ್ಕಾರ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್ಸಿ) ಜಾರಿಗೆ ತರುತ್ತಿರುವುದು ಅಕ್ರಮ ವಲಸಿಗರಿಗೆ ವರದಾನವಾಗಲಿದೆ. ಆಮೂಲಕ ಅಧಿಕೃತವಾಗಿ ಮತದಾರರ ಪಟ್ಟಿಗೆ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯನ್ನೂ ಅಡವಿಡುವ ಮಟ್ಟಕ್ಕೆ ಕಾಂಗ್ರೆಸ್ ತಲುಪಿರುವುದಕ್ಕೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
ಭವಿಷ್ಯದಲ್ಲಿ ಅವರಿಂದಾಗಿ ಏನೇ ಅನಾಹುತ ನಡೆದರೂ ಅದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ಕೂಡಲೇ ಎಷ್ಟು ಅಕ್ರಮ ವಲಸಿಗರು ಪಿ.ಆರ್.ಸಿ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಲಿ. ಗೃಹ ಸಚಿವರಂತೂ ಆರ್.ಎಸ್.ಎಸ್ ನಂತಹ ದೇಶಭಕ್ತ ಸಂಘಟನೆ ನೋಂದಣಿ ಮಾಡಿಕೊಂಡಿಲ್ಲ, ಅದರ ಪಥಸಂಚಲನಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಮನಸ್ಥಿತಿಯಲ್ಲೇ ಮುಳುಗಿರುವುದು ನಾಡಿನ ದೌರ್ಭಾಗ್ಯ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಇದರ ಗಂಭೀರತೆಯ ಅರಿವಿದ್ದರೆ ಈ ಕೂಡಲೇ ರಾಜ್ಯಾದ್ಯಂತ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಿ ಹೊರದಬ್ಬುವ ತಾಕತ್ತು ಪ್ರದರ್ಶಿಸಲಿ. ಮಂಗಳೂರಿನಲ್ಲಿ ಅಕ್ರಮ ವಲಸಿಗರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸಾಧ್ಯತೆಯಿದ್ದು, ಇದು ನಮ್ಮ ಜಿಲ್ಲೆಯ ಭದ್ರತೆಗೆ ಸವಾಲಾಗಿದೆ. ಹಾಗಾಗಿ ನಗರದೆಲ್ಲೆಡೆ ಇರುವ ಬಿಲ್ಡರ್ಗಳು, ಕಟ್ಟಡ ನಿರ್ಮಾಣ ಗುತ್ತಿಗೆದಾರರು, ಹೋಟೆಲ್ ಗಳು, ಸಲೂನ್, ಶಾಪಿಂಗ್ ಮಾಲ್ ಸಹಿತ ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಉದ್ಯೋಗ ನೀಡುವ ವೇಳೆ ಹೆಚ್ಚಿನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಹಾಗೂ ಅನುಮಾನಾಸ್ಪದ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಗೆ ದೂರು ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm