ಬ್ರೇಕಿಂಗ್ ನ್ಯೂಸ್
21-07-26 09:41 pm HK News Staffer ಕರಾವಳಿ
ಮಂಗಳೂರು, ಜುಲೈ 21 : ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು -ಬಿಕರ್ನಕಟ್ಟೆ ವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಸ್ಥಳೀಯ ನಿವಾಸಿಗಳು ಹಾಗೂ ಸಂಘ- ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot Over Bridge) ನಿರ್ಮಾಣಕ್ಕೆ ಈಗಾಗಲೇ ತಾತ್ವಿಕ ಅನುಮೋದನೆ ದೊರಕಿದೆ. ಈ ಯೋಜನೆಯಡಿ ಒಟ್ಟು ₹5,83,86,051 ವೆಚ್ಚದ ಕಾಮಗಾರಿಯಡಿ ಬನ್ನಡ್ಕ ವ್ಯಾಪ್ತಿಯಲ್ಲಿ ಬಿಟ್ಟು ಹೋಗಿರುವ 700 ಮೀಟರ್ ಸರ್ವೀಸ್ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಬಾಕ್ಸ್ ಕಲ್ವರ್ಟ್ಗಳ ಅಗಲೀಕರಣ ಕಾಮಗಾರಿಗಳು (ಒಟ್ಟು4.12 ಕೋಟಿ ರೂ.) ಒಳಗೊಂಡಿವೆ.
ಇದರೊಂದಿಗೆ, ವಾಮಂಜೂರು ಚರ್ಚ್, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಆಸುಪಾಸಿನ ಪ್ರದೇಶದ ನಾಗರಿಕರು ಸುರಕ್ಷಿತವಾಗಿ ರಸ್ತೆ ದಾಟಲು ವಾಮಂಜೂರು ಸಮೀಪ ಸುಸಜ್ಜಿತವಾದ ಪಾದಚಾರಿ ಮೇಲ್ಸೇತುವೆಯನ್ನು (1.7 ಕೋ.ರೂ) ನಿರ್ಮಿಸಲಾಗುವುದು. ಈ ಸಂಬಂಧ NHAI ಬೆಂಗಳೂರು ಪ್ರಾದೇಶಿಕ ಕಚೇರಿಯು ಈ ಚತುಷ್ಪಥ ನಿರ್ಮಾಣದ ಗುತ್ತಿಗೆ ಸಂಸ್ಥೆಯಾದ ದಿಲೀಪ್ ಬಿಲ್ಡ್ಕಾನ್ಗೆ ಅಧಿಕೃತವಾಗಿ ಪತ್ರ ರವಾನಿಸಿದೆ ಎಂದು ಸಂಸದರು ತಿಳಿಸಿದ್ದಾರೆ.
ಈ ಸರ್ವೀಸ್ ರಸ್ತೆ ನಿರ್ಮಾಣ ಹಾಗೂ ಪಾದಚಾರಿ ಮೇಲುಸೇತುವೆ ನಿರ್ಮಾಣಕ್ಕೆ ಅಂತಿಮ ಸಿಒಎಸ್ ಆದೇಶ ಹೊರಡಿಸಲು ಮತ್ತು ತಕ್ಷಣವೇ ಸ್ಥಳದಲ್ಲಿ ಕಾಮಗಾರಿ ಆರಂಭಿಸಲು ಸವಿಸ್ತಾರವಾದ ಅಂದಾಜು ವೆಚ್ಚ ಹಾಗೂ ವಿನ್ಯಾಸಗಳ ನಕ್ಷೆಯನ್ನು ಸಲ್ಲಿಸುವಂತೆ ಗುತ್ತಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ. ತಾಂತ್ರಿಕ ನಕ್ಷೆಗಳ ಪರಿಶೀಲನೆ ಪೂರ್ಣಗೊಂಡ ತಕ್ಷಣವೇ ಸ್ಥಳದಲ್ಲಿ ನಿರ್ಮಾಣ ಕಾರ್ಯ ಚುರುಕುಗೊಳ್ಳಲಿದ್ದು, ಇದರಿಂದ ವಾಹನ ಸವಾರರಿಗೆ ಎದುರಾಗುತ್ತಿದ್ದ ಸಂಚಾರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.
ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ ಇಲ್ಲದೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರೊಂದಿಗೆ ಕ್ಯಾ. ಬ್ರಿಜೇಶ್ ಚೌಟ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ, ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದರು. ಸಂಸದರ ಮನವಿ ಮೇರೆಗೆ ರಸ್ತೆ ನಿರ್ಮಾಣದ ಸವಿವರವಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ತಕ್ಷಣವೇ ಸಲ್ಲಿಸುವಂತೆ ಉಸ್ತುವಾರಿ ಸಂಸ್ಥೆಗೆ ಪ್ರಾಧಿಕಾರವು ಸೂಚಿಸಿತ್ತು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm