ಬ್ರೇಕಿಂಗ್ ನ್ಯೂಸ್
26-07-26 09:57 pm HK News Desk ಕರಾವಳಿ
ಮಂಗಳೂರು, ಜುಲೈ 26: ದುಬೈನಿಂದ ಬಂದಿದ್ದ ಯುವಕನೊಬ್ಬ ತನ್ನ ಪರ್ಸ್ ಒಂದನ್ನು ಏರ್ಪೋರ್ಟ್ ಪಾರ್ಕಿಂಗ್ ಏರಿಯಾದಲ್ಲಿ ಬಿಟ್ಟು ಹೋಗಿದ್ದು, ಬಳಿಕ ಅದನ್ನು ಗಮನಿಸಿದ ಸಿಐಎಸ್ಎಫ್ ಸಿಬಂದಿ ಪ್ರಯಾಣಿಕನ ಮಾಹಿತಿ ಕಲೆಹಾಕಿ ಬೆಲೆಬಾಳುವ ಸೊತ್ತುಗಳಿದ್ದ ಪರ್ಸ್ ಅನ್ನು ಹಿಂದಿರುಗಿಸಿದ ಘಟನೆ ನಡೆದಿದೆ.
ಜುಲೈ 26ರ ಭಾನುವಾರ ಬೆಳಗ್ಗೆ 6.15ರ ವೇಳೆಗೆ ಸಿಐಎಸ್ಎಫ್ ಸಿಬಂದಿ ವಿಠಲ್ ಹೊಸಮನಿ ಅವರು ಪಾರ್ಕಿಂಗ್ ಏರಿಯಾದಲ್ಲಿ ಕಪ್ಪು ಬಣ್ಣದ ಪರ್ಸ್ ಒಂದು ಟ್ರಾಲಿಯಲ್ಲಿ ಉಳಿದಿರುವುದನ್ನು ಗಮನಿಸಿದ್ದರು. ಕೆಳ ಅಂತಸ್ತಿನ ಮಹಡಿಯಲ್ಲಿ ಈ ಪರ್ಸ್ ಸಿಕ್ಕಿದ್ದು ಯಾರೋ ಪ್ರಯಾಣಿಕರು ಬಿಟ್ಟು ಹೋಗಿದ್ದಿರಬೇಕೆಂಬ ಅನುಮಾನ ಇತ್ತು.
ಆದರೂ ಶ್ವಾನ ದಳವನ್ನು ಕರೆಸಿ ತಪಾಸಣೆ ನಡೆಸಿದ್ದು ಯಾವುದೇ ಸ್ಫೋಟಕ ವಸ್ತು ಇಲ್ಲವೆಂದು ಖಚಿತ ಪಡಿಸಿದ ಬಳಿಕ ಪರ್ಸ್ ತೆರೆದು ಪರಿಶೀಲನೆ ನಡೆಸಲಾಯಿತು. ಈ ವೇಳೆ, ಅದರೊಳಗೆ ನಿಶಾಲ್ ಶಾಹಿಕ್ ಹೆಸರಿನ ಪಾಸ್ ಪೋರ್ಟ್, ಐಫೋನ್ ಮೊಬೈಲ್, ಒಂದು ಗೋಲ್ಡ್ ರಿಂಗ್, 500 ದಿರ್ಹಮ್ (ಅಂದಾಜು 11 ಸಾವಿರ ರೂ.), 10 ಸಾವಿರ ಡಾಲರ್ (9 ಲಕ್ಷ ರೂ. ಮೌಲ್ಯ), ಒಂದು ಬೋರ್ಡಿಂಗ್ ಪಾಸ್ ಮತ್ತು ಬ್ಯಾಂಕ್ ಸಂಬಂಧಪಟ್ಟ ಕಾರ್ಡುಗಳು ಇದ್ದವು. ಸಿಸಿಟಿವಿ ಪರಿಶೀಲನೆ ವೇಳೆಯಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿರುವುದು ಪತ್ತೆಯಾಗಿತ್ತು. ಅಲ್ಲದೆ, ಆ ವ್ಯಕ್ತಿ ಅದಾಗಲೇ ಏರ್ಪೋರ್ಟ್ ನಿಂದ ಹೊರಕ್ಕೆ ತೆರಳಿರುವುದು ತಿಳಿದುಬಂತು.
ಆನಂತರ, ಬೋರ್ಡಿಂಗ್ ಪಾಸ್ ನಲ್ಲಿದ್ದ ಮೊಬೈಲ್ ನಂಬರ್ ಆಧರಿಸಿ ಕರೆ ಮಾಡಿ ಪ್ರಯಾಣಿಕನಿಗೆ ಪರ್ಸ್ ಬಿಟ್ಟು ಹೋಗಿರುವುದನ್ನು ತಿಳಿಸಲಾಯಿತು. ನಿಶಾಲ್ ಶಾಹಿಕ್ ಎನ್ನುವ ಯುವಕ ದುಬೈನಿಂದ ಮಂಗಳೂರಿಗೆ ಬಂದಿದ್ದು, ತನ್ನ ಬ್ಯಾಗಿನೊಂದಿಗೆ ಟ್ರಾಲಿ ಬಿಟ್ಟು ತೆರಳುವಾಗ ಪರ್ಸ್ ಉಳಿದುಕೊಂಡಿತ್ತು. ಬಳಿಕ ನಿಶಾಲ್ ಮರಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದು ಸಿಐಎಸ್ಎಫ್ ಸಿಬಂದಿ ನಿಗದಿತ ಪರಿಶೀಲನೆ ಮುಗಿಸಿ ಪರ್ಸ್ ಹಿಂತಿರುಗಿಸಿದರು. ಪ್ರಾಮಾಣಿಕತೆ ತೋರಿದ ಸಿಬಂದಿಯ ಬಗ್ಗೆ ಪ್ರಯಾಣಿಕ ಪ್ರಶಂಸೆ ವ್ಯಕ್ತಪಡಿಸಿದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm