ಬ್ರೇಕಿಂಗ್ ನ್ಯೂಸ್
31-07-26 10:58 pm HK News Staffer ಕರಾವಳಿ
Photo credits : news kannada
ಬೆಂಗಳೂರು, ಜುಲೈ 31: ಕಣ ಕಣದಲ್ಲೂ ಸಮಾಜಘಾತುಕತನವನ್ನು ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಭರತ್ ಶೆಟ್ಟಿ ಅವರ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡು ಪೋಸ್ಟ್ ಮಾಡಿರುವ ಸಚಿವರು, ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು ಎಂದಿದ್ದಾರೆ.
ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಭರತ್ ಶೆಟ್ಟಿ ಬಿಜೆಪಿಯ "ಸುಸಂಸ್ಕೃತ" ಪರಂಪರೆಯ ರಾಯಭಾರಿಯಾಗಿ ಮಾತನಾಡಿದ್ದಾರೆ! ಸಿ.ಟಿ ರವಿ, ಯಶಪಾಲ್ ಸುವರ್ಣ ಬಿಜೆಪಿ ಸಂಸ್ಕೃತಿಯ ರಾಯಭಾರಿ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವಾಗಲೇ ಭರತ್ ಶೆಟ್ಟಿಯವರೂ ನಾನೇನೂ ಕಮ್ಮಿ ಇಲ್ಲ ಎಂದು ಅಖಾಡಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.
ಶಾಸಕ, ಸಂಸದರಂತಹ ಎಷ್ಟೇ ಪ್ರಭಾವಿ ಸ್ಥಾನದಲ್ಲಿದ್ದರೂ ಕಾನೂನು ಪಾಲನೆಯ ಕರ್ತವ್ಯ ಮಾಡಿದ ಪೊಲೀಸರನ್ನು ಜನತೆ ಶ್ಲಾಘಿಸುತ್ತಿದ್ದಾರೆ, ನಿಂದನೆಗೆ ಇಳಿದಿರುವ ಬಿಜೆಪಿಗರಿಗೆ ತಿಳಿದಿರಲಿ, ಪೊಲೀಸರು ಖಾಕಿ ಹಾಕಿಕೊಂಡು ಕಾನೂನು ಪಾಲನೆ ಮಾಡುತ್ತಿದ್ದಾರೆಯೇ ಹೊರತು ಬಿಜೆಪಿಗರಂತೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಗರು ತಾವು ಸಂವಿಧಾನ, ಕಾನೂನು, ನಿಯಮಗಳಿಗೆ ಅತೀತರು ಎಂದು ಭಾವಿಸಿಕೊಂಡಿದ್ದಾರೆ, ಈ ಭ್ರಮೆಯಿಂದ ಹೊರ ಬಂದು ಸಭ್ಯರಾಗದೇ ಇದ್ದಲ್ಲಿ ಕಾನೂನು ತನ್ನ ಕೆಲಸವನ್ನು ಮಾಡುತ್ತದೆ, ಇದಕ್ಕೆ ಯಾರೂ ಹೊರತಲ್ಲ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ. ಬಿಜೆಪಿ ನಾಯಕರಾಗಲಿ, ಕಾರ್ಯಕರ್ತರೇ ಆಗಿರಲಿ, ಕಾನೂನು ಕ್ರಮ ಜರುಗಿಸಬಾರದು ಎಂದರೆ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಮಾತು ಮತ್ತು ಕೃತಿಗಳನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಕರ್ನಾಟಕದ ಪೊಲೀಸರನ್ನು ನಾಯಿಗೆ ಹೋಲಿಸುವ ಮಾತುಗಳು ಅವರ ದುರಹಂಕಾರದ ಪರಮಾವಧಿಯನ್ನು ಸೂಚಿಸುತ್ತದೆ. ನಮ್ಮ ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಯಾವುದೇ ಪ್ರಯತ್ನಗಳನ್ನೂ ನಾನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸಮಾಜಘಾತುಕತನವನ್ನು ಕಣಕಣದಲ್ಲೂ ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ?
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 30, 2026
ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು.
ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಭರತ್ ಶೆಟ್ಟಿ ಬಿಜೆಪಿಯ "ಸುಸಂಸ್ಕೃತ"… pic.twitter.com/ErOwd3vT2x
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm