ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am