ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm