ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm