ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm