ಬ್ರೇಕಿಂಗ್ ನ್ಯೂಸ್
08-01-21 05:41 pm Mangalore Correspondent ಕರಾವಳಿ
ಮಂಗಳೂರು, ಜ.8: ಕೊರೊನಾ ನಿರ್ಬಂಧಗಳಿದ್ದರೂ, ಜನರು ಈಗ ಅದನ್ನು ಗಣನೆಗೆ ತೆಗೆಯುವುದನ್ನು ಮರೆತು ಬಿಟ್ಟಿದ್ದಾರೆ. ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಮನಗಂಡ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಬೀಸಲು ಆರಂಭಿಸಿದ್ದಾರೆ.

ಜ.7ರಂದು ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ. ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.
ಹೀಗಿದ್ದರೂ, ಹಾಲ್ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ಉಲ್ಲಂಘನೆ ಆಗಿದ್ದರಿಂದ ಅಲ್ಲಿಯೂ ದಂಡ ವಿಧಿಸಲಾಗಿದೆ. ಆದರೆ, ಹಾಲ್ ಸಂಬಂಧಿತರು ಮಾತ್ರ ಈ ಬಗ್ಗೆ ಗರಂ ಆಗಿದ್ದಾರೆ. ಎಲ್ಲ ಹಾಲ್ ಗಳಲ್ಲಿಯೂ ಇಂಥ ಉಲ್ಲಂಘನೆ ಆಗುತ್ತದೆ. ಪಾಲಿಕೆಯವರು ಎಲ್ಲ ಕಡೆಯೂ ದಂಡ ವಿಧಿಸಲಿ ಎಂದು ಹೇಳಿದ್ದಾರೆ.
The Mangalore city corporation has imposed a fine of Rs 5000 to Valencia church hall for violating covid rule.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm