ಬ್ರೇಕಿಂಗ್ ನ್ಯೂಸ್
23-08-26 05:36 pm HK News Staffer ಕರಾವಳಿ
ಪುತ್ತೂರು, ಆ.23: ಪುತ್ತೂರು ದರ್ಬೆ ಎಂಬಲ್ಲಿನ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿ ಧಾರ್ಮಿಕ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಬಂದ್ ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಿನೇಶ್ ಪಂಜಿಗ ಎಂಬ ವ್ಯಕ್ತಿ ವಾಟ್ಸಾಪ್ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟಾಗುವಂತಹ ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡುವ ಮೂಲಕ, ಬಂದ್ ಗೆ ಕರೆಕೊಟ್ಟು, ಜನರು ಅಕ್ರಮಕೂಟ ಸೇರಿ ಕಾನೂನುಬಾಹಿರ ಕೃತ್ಯವೆಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದ್ದು, ಸದ್ರಿ ಸಂದೇಶವನ್ನು ಪ್ರಸಾರ ಮಾಡಿದ ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ:100/2026, ಕಲಂ: 353(2),57,189 THE BHARATIYA NYAYA SANHITA (BNS), 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮತ್ತೊಂದು ಪ್ರಕರಣದಲ್ಲಿ "Sanjeeva Matandoor" ಎಂಬ ಫೇಸ್ ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿ ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕ ವಲಯದಲ್ಲಿ ಭಯವನ್ನುಂಟು ಮಾಡುವಂತಹ ಸಂದೇಶವನ್ನು ಪ್ರಸಾರ ಮಾಡುವ ಮೂಲಕ, ಬಂದ್ ಗೆ ಕರೆಕೊಟ್ಟು, ಜನರು ಅಕ್ರಮ ಕೂಟ ಸೇರಿ ಕಾನೂನುಬಾಹಿರ ಕೃತ್ಯವೆಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದ್ದು, ಸದ್ರಿ ಸಂದೇಶವನ್ನು ಪ್ರಸಾರ ಮಾಡಿದ "Sanjeeva Matandoor" ಎಂಬ ಫೇಸ್ ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ:102/2026, ಕಲಂ: 353(2),57,189 THE BHARATIYA NYAYA SANHITA (BNS), 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.
ಪ್ರತಿಯೊಬ್ಬರೂ ಪ್ರತಿಭಟನೆ ನಡೆಸುವ ಹಕ್ಕನ್ನು ಹೊಂದಿದ್ದು, ಪೊಲೀಸ್ ಇಲಾಖೆಯಿಂದ ಅನುಮತಿಯನ್ನು ನೀಡಲಾಗುವುದು. ಆದರೆ ಪ್ರತಿಭಟನೆಯ ದಿನಾಂಕ ಮತ್ತು ಸಮಯವನ್ನು ಸಮಾಜದ ಸ್ವಾಸ್ತ್ಯಕ್ಕೆ ದಕ್ಕೆಯಾಗುವಂತಹ ಯಾವುದೇ ಅನ್ಯ ಉದ್ದೇಶದಿಂದ ನಿಗದಿಪಡಿಸಿರುವುದು ಕಂಡುಬಂದಲ್ಲಿ, ಅಂತಹವರುಗಳ ವಿರುದ್ದ ಪೊಲೀಸ್ ಇಲಾಖೆಯು ಸೂಕ್ತ ಕಾನೂನು ಕ್ರಮ ಜರುಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm