ಬ್ರೇಕಿಂಗ್ ನ್ಯೂಸ್
08-01-21 10:45 pm Mangaluru Correspondant ಕರಾವಳಿ
ಕೊಣಾಜೆ, ಜ.8: ಯುವ ಕಾಂಗ್ರೆಸ್ ಗಾದಿಯ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆಂಗಳೂರಿನ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪ್ಪಾಡ್ ಪರ ಪ್ರಚಾರಕ್ಕೆ ಬಂದ ಬೆಂಗಳೂರಿನ ಬೆಂಬಲಿಗರು ಮಕ್ಕಳನ್ನು ಅಪಹರಿಸಿದ್ದಾರೆಂಬ ವದಂತಿ ಕೇಳಿಬಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಸಂಗ ನಡೆದಿದೆ.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ಮಹಮ್ಮದ್ ನಲಪ್ಪಾಡ್ ಸ್ಪರ್ಧಿಸುತ್ತಿದ್ದು, ಇದರ ಹಿನ್ನಲೆಯಲ್ಲಿ ಮುಡಿಪು ಭಾಗಕ್ಕೆ ಮಹಮ್ಮದ್ ಪರವಾಗಿ ಚುನಾವಣಾ ಪ್ರಚಾರಕ್ಕೆ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮಹಮ್ಮದ್ ಹ್ಯಾರಿಸ್ ಬೆಂಬಲಿಗರು ದೇರಳಕಟ್ಟೆ ಜಂಕ್ಷನ್ ನಲ್ಲಿ ಹಾಟ್ ಚಿಪ್ಸ್ ಸೆಂಟರಲ್ಲಿ ಉಪಹಾರ ಮುಗಿಸಿ ಹೊರ ಬರುತ್ತಿದ್ದ ವೇಳೆ ಹೊರಗಿದ್ದ ಇಬ್ಬರು ಮಕ್ಕಳಿಗೆ ಚಾಕಲೇಟು ನೀಡಲು ಹೋಗಿದ್ದರು. ಈ ಸಂದರ್ಭದಲ್ಲಿ ಒಂದು ಮಗು ಜೋರಾಗಿ ಕಿರುಚಿದ್ದು ಸ್ಥಳೀಯರು ವಿಚಾರಿಸಲು ಬಂದಾಗ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಎರಡು ಕಾರಲ್ಲಿ ಬೆಂಗಳೂರಿಗೆ ತಡಬಡಾಯಿಸಿ ಅಲ್ಲಿಂದ ಹೊರಟಿದ್ದರು.
ಇದರಿಂದ ಸಂಶಯಗೊಂಡು ಅವರನ್ನು ಸ್ಥಳೀಯರು ಬೆನ್ನತ್ತಿದ್ದು ನಾಟೆಕಲ್ ನಲ್ಲಿ ಅಡ್ಡ ಹಾಕಿ ಕೊಣಾಜೆ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದ್ದು, ಮಕ್ಕಳ ಅಪಹರಣ ವಿಚಾರ ಸುಳ್ಳಾಗಿದೆ. ಕೇವಲ ವದಂತಿ ಕೇಳಿ ಸ್ಥಳೀಯರು ಉದ್ರಿಕ್ತರಾಗಿದ್ದರು ಅನ್ನೋದು ತಿಳಿದುಬಂದಿದೆ.
ಮಹಮ್ಮದ್ ನಲಪ್ಪಾಡ್ ಬೆಂಬಲಿಗರ ಕಾರಿನ ಹಿಂಭಾಗ ದಲ್ಲಿ ಮಹಮ್ಮದ್ ಅವರ ಭಾವಚಿತ್ರದ ಸ್ಟಿಕ್ಕರ್ ಅಂಟಿಸಿದ್ದರೆನ್ನಲಾಗಿದೆ. ಘಟನೆಯ ಲಾಭವೆತ್ತಲೆಂದೇ ಕೊಣಾಜೆ ಠಾಣೆಯಲ್ಲಿ ಕೆಲ ಕಾಲ ಜನಜಂಗುಳಿ ಜಮಾವಣೆಯಾಗಿದ್ದು ಪೊಲೀಸರು ಜನರನ್ನು ಚದುರಿಸಿದ್ದಾರೆ.
Supporters of Mohammed Haris Nalapad who is contesting elections for the post of Youth Congress state president are facing allegations of kidnapping a child in Konaje, Mangalore.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am