ಬ್ರೇಕಿಂಗ್ ನ್ಯೂಸ್
08-01-21 10:45 pm Mangaluru Correspondant ಕರಾವಳಿ
ಕೊಣಾಜೆ, ಜ.8: ಯುವ ಕಾಂಗ್ರೆಸ್ ಗಾದಿಯ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆಂಗಳೂರಿನ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪ್ಪಾಡ್ ಪರ ಪ್ರಚಾರಕ್ಕೆ ಬಂದ ಬೆಂಗಳೂರಿನ ಬೆಂಬಲಿಗರು ಮಕ್ಕಳನ್ನು ಅಪಹರಿಸಿದ್ದಾರೆಂಬ ವದಂತಿ ಕೇಳಿಬಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಸಂಗ ನಡೆದಿದೆ.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ಮಹಮ್ಮದ್ ನಲಪ್ಪಾಡ್ ಸ್ಪರ್ಧಿಸುತ್ತಿದ್ದು, ಇದರ ಹಿನ್ನಲೆಯಲ್ಲಿ ಮುಡಿಪು ಭಾಗಕ್ಕೆ ಮಹಮ್ಮದ್ ಪರವಾಗಿ ಚುನಾವಣಾ ಪ್ರಚಾರಕ್ಕೆ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮಹಮ್ಮದ್ ಹ್ಯಾರಿಸ್ ಬೆಂಬಲಿಗರು ದೇರಳಕಟ್ಟೆ ಜಂಕ್ಷನ್ ನಲ್ಲಿ ಹಾಟ್ ಚಿಪ್ಸ್ ಸೆಂಟರಲ್ಲಿ ಉಪಹಾರ ಮುಗಿಸಿ ಹೊರ ಬರುತ್ತಿದ್ದ ವೇಳೆ ಹೊರಗಿದ್ದ ಇಬ್ಬರು ಮಕ್ಕಳಿಗೆ ಚಾಕಲೇಟು ನೀಡಲು ಹೋಗಿದ್ದರು. ಈ ಸಂದರ್ಭದಲ್ಲಿ ಒಂದು ಮಗು ಜೋರಾಗಿ ಕಿರುಚಿದ್ದು ಸ್ಥಳೀಯರು ವಿಚಾರಿಸಲು ಬಂದಾಗ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಎರಡು ಕಾರಲ್ಲಿ ಬೆಂಗಳೂರಿಗೆ ತಡಬಡಾಯಿಸಿ ಅಲ್ಲಿಂದ ಹೊರಟಿದ್ದರು.
ಇದರಿಂದ ಸಂಶಯಗೊಂಡು ಅವರನ್ನು ಸ್ಥಳೀಯರು ಬೆನ್ನತ್ತಿದ್ದು ನಾಟೆಕಲ್ ನಲ್ಲಿ ಅಡ್ಡ ಹಾಕಿ ಕೊಣಾಜೆ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದ್ದು, ಮಕ್ಕಳ ಅಪಹರಣ ವಿಚಾರ ಸುಳ್ಳಾಗಿದೆ. ಕೇವಲ ವದಂತಿ ಕೇಳಿ ಸ್ಥಳೀಯರು ಉದ್ರಿಕ್ತರಾಗಿದ್ದರು ಅನ್ನೋದು ತಿಳಿದುಬಂದಿದೆ.
ಮಹಮ್ಮದ್ ನಲಪ್ಪಾಡ್ ಬೆಂಬಲಿಗರ ಕಾರಿನ ಹಿಂಭಾಗ ದಲ್ಲಿ ಮಹಮ್ಮದ್ ಅವರ ಭಾವಚಿತ್ರದ ಸ್ಟಿಕ್ಕರ್ ಅಂಟಿಸಿದ್ದರೆನ್ನಲಾಗಿದೆ. ಘಟನೆಯ ಲಾಭವೆತ್ತಲೆಂದೇ ಕೊಣಾಜೆ ಠಾಣೆಯಲ್ಲಿ ಕೆಲ ಕಾಲ ಜನಜಂಗುಳಿ ಜಮಾವಣೆಯಾಗಿದ್ದು ಪೊಲೀಸರು ಜನರನ್ನು ಚದುರಿಸಿದ್ದಾರೆ.
Supporters of Mohammed Haris Nalapad who is contesting elections for the post of Youth Congress state president are facing allegations of kidnapping a child in Konaje, Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm