ಬ್ರೇಕಿಂಗ್ ನ್ಯೂಸ್
09-01-21 02:19 pm Mangalore Correspondent ಕರಾವಳಿ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿಯುತ್ತಾ ನಿಂತಿದ್ದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಅವರ ತಂಡ ಇದ್ದ ಜಾಗಕ್ಕೆ ಬಂದ ತಾತಪ್ಪನೊಬ್ಬ ಸಾರ್ವಜನಿಕವಾಗಿ ಎಲ್ರೂ ಮಾಸ್ಕ್ ಹಾಕ್ರಿ ಎಂದು ಬೊಬ್ಬೆ ಹೊಡೆದು ಪೊಲೀಸರನ್ನು ಪರೋಕ್ಷವಾಗಿ ಎಚ್ಚರಿಸಿದ ಘಟನೆ ನಡೆದಿದೆ.
ತಾತಪ್ಪನ ಕಾಳಜಿ ಕಂಡು ಅವ ಅವಾಕ್ಕಾದ ಪೊಲೀಸ್ ಕಮಿಷನರ್ ಕೂಡ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡು ತಾತಪ್ಪನನ್ನು ಹತ್ತಿರಕ್ಕೆ ಕರೆದು ಸೀಯಾಳ ಕೊಟ್ಟು ಉಪಚರಿಸಿದ್ದಾರೆ.
ತೊಕ್ಕೊಟ್ಟು ಒಳಪೇಟೆಯ ಮೂರು ಅನಧಿಕೃತ ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಘಟನಾ ಸ್ಥಳಕ್ಕೆ ಇಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಮೀಷನರ್, ಡಿಸಿಪಿ, ಎಸಿಪಿ, ಉಳ್ಳಾಲ ಪಿಐ ಅವರನ್ನು ಒಳಗೊಂಡಿದ್ದ ತಂಡವು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿದು ಮಾಸ್ಕನ್ನು ಕತ್ತಿಗೆ ಜಾರಿಸಿಕೊಂಡು ಮಾತುಕತೆಯಲ್ಲಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯ ಪ್ರಾಯದ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಮಾಸ್ಕ್ ಹಾಕ್ರಿ ಎಂದು ಗಟ್ಟಿಯಾಗಿ ಒಸರಿದ್ದು, ಇದು ಪೊಲೀಸ್ ತಂಡಕ್ಕೂ ಪರೋಕ್ಷವಾಗಿ ಎಚ್ವರಿಸಿದಂತಿತ್ತು. ಕೂಡಲೇ ಕಮೀಷನರ್, ಡಿಸಿಪಿಯವರು ಕತ್ತಲ್ಲಿದ್ದ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡಿದ್ದಾರೆ.
ಈ ವೇಳೆ, ಕಮಿಷನರ್ ಅವರ ಸಹಾಯಕರು ತಾತಪ್ಪ ಸೇರಿ ಸಾರ್ವಜನಿಕರನ್ನು ಗದರಿಸಲು ಮುಂದಾಗಿದ್ದಾರೆ. ಕಮಿಷನರ್ ಶಶಿಕುಮಾರ್ ಮಾತ್ರ ಮಾಸ್ಕ್ ಬಗ್ಗೆ ಕಾಳಜಿ ಮೂಡಿಸಿದ ತಾತಪ್ಪನನ್ನು ಆಲಿಂಗಿಸಿ ಸೀಯಾಳ ಕೊಟ್ಟು ಉಪಚರಿಸಿ ಸ್ಥಳದಿಂದ ತೆರಳಿದ್ದಾರೆ.
An Elderly Man in Ullal was found advising Police Commissioner and team to wear mouth mask when they were found without wearing a mask.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm