ಬ್ರೇಕಿಂಗ್ ನ್ಯೂಸ್
07-09-26 09:57 pm HK News Staffer ಕರಾವಳಿ
ಉಳ್ಳಾಲ, ಸೆ-07: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಹೆಸರು ಎಸ್ಐಆರ್ ಪ್ರಕ್ರಿಯೆಯಲ್ಲಿ ತಾಳೆಯಾಗದ ಕಾರಣ ಚುನಾವಣಾ ಆಯೋಗವು ಸೋಮವಾರ ಬೆಳಗ್ಗೆ ಅವರಿಗೆ ನೋಟಿಸ್ ನೀಡಿದ್ದು, ಸಂಜೆಯ ವೇಳೆಗೆ ಸಂಬಂಧಪಟ್ಟ ಅಧಿಕಾರಿಗಳು ನೋಟೀಸನ್ನು ವಾಪಸ್ಸು ಪಡೆದುಕೊಂಡಿದ್ದಾರೆ.
2002ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ‘ಹಾಜಬ್ಬ’ ಎಂದು ಮಾತ್ರ ದಾಖಲಾಗಿದ್ದು, ಪ್ರಸ್ತುತ ಆಧಾರ್, ರೇಷನ್ ಕಾರ್ಡ್, ಪಾಸ್ಪೋರ್ಟ್ ಹಾಗೂ ಮತದಾರರ ಗುರುತಿನ ಚೀಟಿ ಸೇರಿದಂತೆ ಇತರ ದಾಖಲೆಗಳಲ್ಲಿ ‘ಹರೇಕಳ ಹಾಜಬ್ಬ’ ಎಂದು ನಮೂದಿಸಲಾಗಿದೆ. ಹಳೆಯ ಮತದಾರರ ಪಟ್ಟಿಯಲ್ಲಿನ ಹೆಸರು ಮತ್ತು ಈಗಿನ ದಾಖಲೆಗಳಲ್ಲಿನ ಹೆಸರು ಹೊಂದಿಕೆಯಾಗದ ಹಿನ್ನೆಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಯಡಿ ನೋಟಿಸ್ ನೀಡಿ ಸೆ.11ರಂದು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್ಗೆ ಹಾಜರಾಗುವಂತೆ ಸೂಚಿಸಿದ್ದರೆನ್ನಲಾಗಿದೆ.
ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಡುತ್ತಿದ್ದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜಬ್ಬರ ಮನೆಗೆ ಬಂದು ನೋಟೀಸ್ ವಾಪಸ್ಸು ಪಡೆದು ಪರಿಶೀಲಿಸಿ ಹೇಳುತ್ತೇವೆಂದು ಹೇಳಿ ತೆರಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಹಾಜಬ್ಬರು ಇಂದು ಸುಮಾರು ಹನ್ನೊಂದು ಗಂಟೆಯ ವೇಳೆಗೆ ಇಬ್ಬರು ಅಂಗನವಾಡಿ ಶಿಕ್ಷಕಿಯರು ಮನೆಗೆ ಬಂದು ಮತದಾರರ ಪಟ್ಟಿಯ ವಿಷಯಕ್ಕೆ ಸಂಬಂಧಿಸಿ ನೋಟೀಸ್ ನೀಡಿ, ಬಳಿಕ ಶುಕ್ರವಾರ ಪಂಚಾಯತ್ ಗೆ ದಾಖಲೆಗಳೊಂದಿಗೆ ಬರಲು ತಿಳಿಸಿದ್ದರು. ಆದರೆ ಮಧ್ಯಾಹ್ನ 3 ಗಂಟೆಯ ವೇಳೆಗೆ ಪಂಚಾಯತ್ ನಿಂದ ಸಂಬಂಧಪಟ್ಟ ಅಧಿಕಾರಿಗಳು ಬಂದು ನೋಟೀಸ್ ಹಿಂಪಡೆದು, ಈ ಬಗ್ಗೆ ಪರಿಶೀಲಿಸಿ ಬರುತ್ತೇವೆ ಎಂದು ಹೇಳಿ ತೆರಳಿದ್ದಾರೆ ಎಂದಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm