ಬ್ರೇಕಿಂಗ್ ನ್ಯೂಸ್
09-01-21 05:16 pm Mangalore Correspondent ಕರಾವಳಿ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯ ಮೂರು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನ ಮೂರು ದಿವಸಗಳೊಳಗೆ ಬಂಧಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸೋದಾಗಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಕಿಡಿಗೇಡಿಗಳಿಂದ ಬೆಂಕಿ ಹಚ್ಚಲ್ಪಟ್ಟ ತೊಕ್ಕೊಟ್ಟು ಒಳಪೇಟೆಯ ಕಸಾಯಿ ಖಾನೆಗೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ನೇತೃತ್ವದ ತಂಡ ಭೇಟಿ ನೀಡಿತು.

ಈ ವೇಳೆ ಮಾತನಾಡಿದ ಸಂತೋಷ್ ಕುಮಾರ್ ಶೆಟ್ಟಿ ಅವರು, ಬೀಫ್ ವ್ಯಾಪಾರಸ್ಥರ ಕುಟುಂಬ ಕಳೆದ 75 ವರ್ಷದಿಂದ ಇಲ್ಲಿ ವ್ಯಾಪಾರ ನಡೆಸುತ್ತಿದ್ದು, ಕಳೆದ ರಾತ್ರಿ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬಡ ವ್ಯಾಪಾರಿಗಳಿಗೆ ದಿಕ್ಕು ತೋಚದಂತೆ ಆಗಿದೆ. ಏಕಾಏಕಿ ಬಂದು ಬೆಂಕಿ ಹಚ್ಚಿದ್ದರಿಂದ ಅವರು ಹೇಗೆ ಕುಟುಂಬ ನಿರ್ವಹಣೆ ಮಾಡಬೇಕು? ಅವರ ಕುಟುಂಬ ಬೀದಿಗೆ ಬಂದಿದೆ. ಮೂರು ದಿನದೊಳಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಬೇಕು. ಇಲ್ಲವಾದ್ದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆಯನ್ನು ನಡೆಸಲಾಗುವುದು ಎಂದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಹ್ಮಾನ್ ಕೋಡಿಜಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜ, ಸೋಮೇಶ್ವರ ವಲಯ ಕಾಂಗ್ರೆಸ್ ಅಧ್ಯಕ್ಷ ಕಿಶೋರ್ ಗಟ್ಟಿ, ಕಾಂಗ್ರೆಸ್ ಪ್ರಮುಖರಾದ ಪದ್ಮನಾಭ ಉಳ್ಳಾಲ್, ರಿಚರ್ಡ್ ಉಳ್ಳಾಲ್, ನಗರಸಭೆ ಸದಸ್ಯ ರವಿಚಂದ್ರ ಗಟ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರ ಇಂಟಕ್ ಅಧ್ಯಕ್ಷ ಹರೀಶ್ ರಾವ್, ಯೂತ್ ಇಂಟಕ್ ಅಧ್ಯಕ್ಷ ಸಿದ್ದೀಕ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್, ಉಪಾಧ್ಯಕ್ಷರಾದ ಸಿರಾಜ್, ತಾಜುದ್ದೀನ್, ಕೋಟೆಕಾರ್ ಗ್ರಾಮ ಯೂತ್ ಇಂಟಕ್ ಅಧ್ಯಕ್ಷ ಆಸಿಫ್ ಹಾಗೂ ನಿಯಾಝ್ ಉಪಸ್ಥಿತರಿದ್ದರು.
Ullal fire to beef stalls miscreants who set fire to Beef stall in Ullal be arrested in 3 days warns congress leader santosh Kumar.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am