ಬ್ರೇಕಿಂಗ್ ನ್ಯೂಸ್
12-08-20 01:32 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 12: ಸಾಮಾಜಿಕ ಜಾಲತಾಣದಲ್ಲಿ ಪೈಗಂಬರರನ್ನು ನಿಂದಿಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಿನ ಕೆ ಜಿ ಹಳ್ಳಿ, ಡಿ ಜೆ ಹಳ್ಳಿ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ಖಂಡನೀಯ. ಜನತೆ ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳದೆ ಸಹನೆಯಿಂದ ವರ್ತಿಸಬೇಕಿದೆ. ಪ್ರಮುಖವಾಗಿ ಇಂತಹ ಆಪತ್ಕಾಲದಲ್ಲಿ ತಮ್ಮನ್ನು ಪ್ರಚೋದಿಸುವ ಶಕ್ತಿಗಳ ಕುರಿತು ಮುಸ್ಲಿಂ ಸಮುದಾಯ ಎಚ್ಚರಿಕೆಯಿಂದ ಇರಬೇಕಿದೆ. ಇಷ್ಟು ದೊಡ್ಡ ಪ್ರಮಾಣದ ಹಿಂಸಾಚಾರ ದಿಢೀರ್ ಆಗಿ ನಡೆಯುವುದರ ಹಿಂದೆ ಕಾಣದ ಕೈಗಳ ವ್ಯವಸ್ಥಿತ ಪಿತೂರಿಯ ಸಾಧ್ಯತೆಗಳು ಕಂಡುಬರುತ್ತವೆ. ಜನರ ಬದುಕಿನ ಜೊತೆ ಚೆಲ್ಲಾಟವಾಡುವ ಇಂತಹ ಶಕ್ತಿಗಳನ್ನು ನ್ಯಾಯಯುತ ತನಿಖೆಯ ಮೂಲಕ ಬಯಲಿಗೆ ತರಬೇಕು ಎಂದು ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸಿದೆ. ಹಿಂಸಾಚಾರದಲ್ಲಿ ಆಸ್ತಿಪಾಸ್ತಿ ನಷ್ಟಗೊಂಡವರಿಗೆ, ಗೋಲಿಬಾರ್ ಗೆ ಬಲಿಯಾದವರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದೆ.

ಕಾಂಗ್ರೆಸ್ ಶಾಸಕರೊಬ್ಬರ ಸಂಬಂಧಿ ಪೈಗಂಬರರನ್ನು ಅವಹೇಳನ ಮಾಡಿ ಹಾಕಿರುವ ಪೋಸ್ಟ್ ಕುರಿತು ಪೊಲೀಸರು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ಅದಷ್ಟನ್ನೇ ಮುಂದಿಟ್ಟು ದೊಡ್ಡ ಪ್ರಮಾಣದಲ್ಲಿ ಮುಗ್ಧ ಜನರನ್ನು ಪ್ರಚೋದಿಸಿ ಗುಂಪು ಸೇರಿಸಿರುವುದು, ಏಕಕಾಲದಲ್ಲಿ ಪೊಲೀಸ್ ಠಾಣೆ ಹಾಗೂ ಶಾಸಕರ ಮನೆ ಮೇಲೆ ದಾಳಿ ನಡೆಸಿರುವುದರ ಹಿಂದೆ ವ್ಯವಸ್ಥಿತ ಪಿತೂರಿಯ ಸಾಧ್ಯತೆ ದಟ್ಟವಾಗುತ್ತದೆ. ಅದರಲ್ಲೂ ಸಂಬಂಧಿಯ ತಪ್ಪಿಗೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಗೆ ಬೆಂಕಿ ಹಚ್ಚಿರುವುದರ ಹಿಂದೆ ರಾಜಕೀಯ ತಂತ್ರಗಾರಿಕೆಯ ಅನುಮಾನ ಮೂಡಿಸುತ್ತದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಉದ್ರಿಕ್ತ ಗುಂಪನ್ನು ಹಿಂಸೆಗಿಳಿಸುವ ಹಿಂದೆ ನಕಾರಾತ್ಮಕ ಶಕ್ತಿಗಳ ಪ್ರಬಲ ಒತ್ತಾಸೆ ಇರುವಂತಿದೆ. ಈ ಕುರಿತು ಸಮಗ್ರ ತನಿಖೆ ನಡೆದು ಅಂತಹ ಶಕ್ತಿಗಳನ್ನು ಬಯಲಿಗೆ ತರಬೇಕಿದೆ. ಇದಲ್ಲದೆ ರಾಜಧಾನಿಯ ಹೃದಯ ಭಾಗದಲ್ಲಿ ನಡೆದ ಬಹುದೊಡ್ಡ ಹಿಂಸಾಚಾರದ ಕುರಿತು ಗುಪ್ತಚರ ವರದಿ ಸರಕಾರಕ್ಕೆ ತಲುಪದಿರುವುದು ಅನುಮಾನಕ್ಕೆ ಎಡೆ ಮಾಡಿದೆ.

ಬಲಪಂಥೀಯ ಶಕ್ತಿಗಳ ನಿರಂತರ ದಾಳಿಗಳಿಂದ ಬಸವಳಿದಿರುವ, ಅವಹೇಳನ, ನಿಂದನೆಗೆ ಗುರಿಯಾಗಿ ಮುಖ್ಯವಾಹಿನಿಯಿಂದ ಅಂಚಿಗೆ ತಳ್ಳಲ್ಪಡುತ್ತಿರುವ ಮುಸ್ಲಿಂ ಸಮುದಾಯ ಇಂತಹ ಪ್ರಚೋದಿಸುವ ಶಕ್ತಿಗಳ ಷಡ್ಯಂತ್ರಗಳ ಕುರಿತು ಅತೀವ ಜಾಗ್ರತೆ ವಹಿಸಬೇಕಿದೆ. ತಮ್ಮೊಳಗೆ ನೆಲಯೂರಲು ಯತ್ನಿಸುತ್ತಿರುವ ಮತೀಯವಾದಿ ಶಕ್ತಿಗಳನ್ನು ತಿರಸ್ಕರಿಸಿ ಜಾತ್ಯತೀತತೆ, ಪ್ರಜಾಪ್ರಭುತ್ವವಾದಿ ಆಶಯಗಳನ್ನು ಎತ್ತಿ ಹಿಡಿಯುವ ಮೂಲಕ ತಮ್ಮನ್ನು ಬಲಿಪಶು ಮಾಡುವ ಎಲ್ಲ ರೀತಿಯ ಕೋಮುವಾದವನ್ನು ಹಿಮ್ಮೆಟ್ಟಿಸಲು ಮುಂದಡಿಯಿಡಬೇಕು ಎಂದು ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm