ಬ್ರೇಕಿಂಗ್ ನ್ಯೂಸ್
12-08-20 02:39 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ.
ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.

ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm