ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm