ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm