ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am