ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am