ಬ್ರೇಕಿಂಗ್ ನ್ಯೂಸ್
12-01-21 11:47 am Mangalore Correspondent ಕರಾವಳಿ
ಮಂಗಳೂರು, ಜ.12: ಕನ್ಸಲ್ಟೆನ್ಸಿ ಅಧಿಕಾರಿಗಳು ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಯನ್ನು ಹಾಳು ಮಾಡುತ್ತಿದ್ದಾರೆ. ಚುನಾಯಿತ ಜನಪ್ರತಿನಿಧಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ಅವ್ಯವಹಾರಕ್ಕೆ ಇವರು ಕಾರಣ. ನಮ್ಮನ್ನು ಕೂಡ ದಾರಿ ತಪ್ಪಿಸಲು ಯತ್ನ ಮಾಡಿದ್ದರು. ಇವರನ್ನು ಒದ್ದೋಡಿಸುವ ಕೆಲಸ ಆಗಬೇಕು. ಕನ್ಸಲ್ಟನ್ಸಿಗಳನ್ನು ನಂಬಿ ಮೋಸ ಹೋಗಬೇಡಿ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿಯ ವೈಫಲ್ಯ, ಅವ್ಯವಹಾರ ಮತ್ತು ಇದರಿಂದ ಕಾಮಗಾರಿ ಹಠಾತ್ ಸ್ಥಗಿತಗೊಂಡಿರುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾನಗರ ಪಾಲಿಕೆ ಕಟ್ಟಡದ ಸ್ಮಾರ್ಟ್ ಸಿಟಿ ಕಚೇರಿಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಮಾನಾಥ ರೈ ಮಾತನಾಡಿದರು.
ಮಂಗಳೂರಿನಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡ್ತಾ ಇಲ್ಲ. ಅಧಿಕಾರ ಹಸ್ತಕ್ಷೇಪ ನಡೆಸುತ್ತಿದ್ದು ಅಧಿಕಾರಿಗಳಿಗೆ ಉಸಿರು ಕಟ್ಟಿದ ವಾತಾವರಣ ಇದೆ. ಒಂದು ಟೆಂಡರ್ ಆದರೆ ಅದನ್ನು ರಾತ್ರೋರಾತ್ರಿ ಬದಲಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಆಡಳಿತ ಇದ್ದಾಗ ಒಳ್ಳೆಯ ಯೋಜನೆ ತಂದಿದ್ದೇವೆ. ಸ್ಮಾರ್ಟ್ ಸಿಟಿ ಬರುವುದಕ್ಕಾಗಿ ಮಾನದಂಡ ಪಾಲಿಸಿಕೊಂಡು ನೂರಾರು ಮೀಟಿಂಗ್ ಮಾಡಿ, ಯೋಜನೆ ತಂದಿದ್ದೇವೆ. ಈಗ ಸ್ಮಾರ್ಟ್ ಸಿಟಿ ಯೋಜನೆಯಡಿ ಭ್ರಷ್ಟಾಚಾರದ ವಾಸನೆ ಬರ್ತಾ ಇದೆ. ನಾವು ಕೆಲವೇ ಸದಸ್ಯರು ಇದ್ದರೂ ಜೊಲ್ಲು ಸುರಿಸುವ ಜನರಲ್ಲ. ಮೌಲ್ಯಾಧರಿತ ನಿಲುವಿನಲ್ಲಿ ನಿರಂತರ ಹೋರಾಟ ಮಾಡ್ತಿವಿ. ಕೆಟ್ಟ ಆಡಳಿತಕ್ಕೆ ಕಿವಿ ಹಿಂಡುತ್ತೇವೆ. ತಿಲಾಂಜಲಿ ಇಡುವ ಕೆಲಸ ಮಾಡುತ್ತೇವೆ ಎಂದು ರಮಾನಾಥ ರೈ ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ಕನ್ಸಲ್ಟನ್ಸಿಗಳು ನಮ್ಮ ಆಡಳಿತ ಇದ್ದಾಗಲೂ ದಾರಿ ತಪ್ಪಿಸುವ ಕೆಲಸ ಮಾಡಿದ್ರು. ಈಗಿನ ಆಡಳಿತವನ್ನು ಮೂಗುದಾರ ಇಟ್ಟುಕೊಂಡು ಕುಣಿಸುತ್ತಿದ್ದಾರೆ ಎಂದು ಹೇಳಿದರು.
ದ.ಕ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಇದು ಮೊದಲ ಹಂತದ ಪ್ರತಿಭಟನೆ. ಅಧಿಕಾರಿಗಳು, ಶಾಸಕರಿಗೆ ಈ ಮೂಲಕ ಎಚ್ಚರಿಕೆ ಗಂಟೆ ನೀಡುತ್ತಿದ್ದೇವೆ. ನಮ್ಮದು ಅಧಿಕಾರಕ್ಕಾಗಿ ಹೋರಾಟ ಅಲ್ಲ. ಅನ್ಯಾಯ, ಅವ್ಯವಹಾರದ ವಿರುದ್ಧ ಅಷ್ಟೇ ಎಂದರು.
Crores of Funds have been misused in the name of Smart City by the leaders of Mangalore city corporation slams congress leaders in their protest in front of city corporation in Mangalore
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm