ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am