ಬ್ರೇಕಿಂಗ್ ನ್ಯೂಸ್
13-01-21 01:16 pm Mangaluru Correspondant ಕರಾವಳಿ
ಮಂಗಳೂರು, ಜ.12: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರುವ ಯಾದಿಯಲ್ಲಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ನಿರಾಸೆಗೊಂಡಿದ್ದಾರೆ. ಸಂಪುಟ ಸೇರುವ ಏಳು ಮಂದಿಯ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ , ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯಮಾರ್ಗ ತಿಳಿದಿಲ್ಲ. ಜಾತಿ ರಾಜಾಕರಣದ ವೈಭವೀಕರಣ ತಿಳಿದಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯೂ ಈ ಮಾರ್ಗ ಹಿಡಿಯುವುದಿಲ್ಲ ಎಂಬುದಾಗಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ಸಿಕ್ಕಿದೆ. ಜಾತಿಯ ಕೋಟಾದಡಿ ಲಾಬಿ ಮಾಡಿದವರಿಗೂ ಸ್ಥಾನ ಲಭಿಸಿದೆ. ಹೀಗಾಗಿ ಆ ರೀತಿಯ ಲಾಬಿ ನಡೆಸಲು ಹೋಗಿಲ್ಲ ಎನ್ನುವ ರೀತಿ ಟ್ವೀಟ್ ಮಾಡಿದ್ದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
— Sunil Kumar Karkala (@karkalasunil) January 13, 2021
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
ಕಾರ್ಕಳದಲ್ಲಿ ಮೂರು ಬಾರಿ ಶಾಸಕರಾಗಿರುವ ಸುನಿಲ್ ಕುಮಾರ್, ಸುಳ್ಯದ ಅಂಗಾರ ಬಿಟ್ಟರೆ ಅತಿ ಹೆಚ್ಚು ಅನುಭವ ಇರುವ ಹಿರಿಯ ಶಾಸಕರಲ್ಲಿ ಒಬ್ಬರು. ಹೀಗಾಗಿ ಅಂಗಾರ ಅಥವಾ ಸುನಿಲ್ ಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಅಲ್ಲದೆ, ವಿಧಾನ ಪರಿಷತ್ ಸದಸ್ಯ, ಹಾಲಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಟ್ಟು ಬಿಲ್ಲವ ಸಮುದಾಯದವರೇ ಆಗಿರುವ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನುವ ಮಾಹಿತಿಗಳಿದ್ದವು. ಆದರೆ, ಕೊನೆಗಳಿಗೆಯಲ್ಲಿ ಕೋಟ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಪ್ರಸ್ತಾಪ ಆಗಿಲ್ಲ. ಹೀಗಾಗಿ ಸುನಿಲ್ ಕುಮಾರ್ ಆಸೆಯೂ ಕೈಗೂಡಲಿಲ್ಲ.
ಸುನಿಲ್ ಕುಮಾರ್ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಯ ಹಲವರಿಗೆ ನಿರಾಸೆಯಾಗಿದ್ದು, ಮುಂದಿನ ವಾರ ಸಭೆ ಸೇರಿ ಪಕ್ಷದ ಹಿರಿಯರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಗಳಿವೆ.
Karnataka cabinet expansion Karkala MLA Sunil Kumar makes a disappointed tweet for not considering him.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm