ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am