ಬ್ರೇಕಿಂಗ್ ನ್ಯೂಸ್
14-01-21 03:31 pm Mangalore Correspondent ಕರಾವಳಿ
ಉಳ್ಳಾಲ, ಜ.14: ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆಯಲ್ಲೇ ವ್ಯಕ್ತಿಯೋರ್ವರಿಗೆ ಹೃದಯಾಘಾತ ಆಗಿರುವ ಘಟನೆ ತೊಕ್ಕೊಟ್ಟು ಸಮೀಪದ ರಾ.ಹೆ. 66 ರ ಕಲ್ಲಾಪಿನಲ್ಲಿ ನಡೆದಿದೆ.
ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ವೈದ್ಯೆಯೋರ್ವರು, ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ವ್ಯಕ್ತಿ ಚೇತರಿಸಿದ್ದಾರೆ.
ಪುತ್ತೂರು ಮೂಲದ ಅಭಿಷೇಕ್ (43) ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ. ಅಭಿಷೇಕ್ ಕುಟುಂಬದವರೊಂದಿಗೆ ಕಲ್ಲಾಪಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮಹಿಳಾ ವೈದ್ಯರೊಬ್ಬರು ಅಭಿಷೇಕ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ಕಲ್ಲಾಪು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು ಉಳ್ಳಾಲ ಮತ್ತು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Doctor Saved man who had a Heart Attack while driving his car in Ullal in Mangalore. The doctor was just behind Man's car and has saved his life by getting him admitted to the hospital.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm