ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm