ಬ್ರೇಕಿಂಗ್ ನ್ಯೂಸ್
16-01-21 11:06 am Mangalore Correspondent ಕರಾವಳಿ
ಬಂಟ್ವಾಳ, ಜ.16 : ವಾರದ ಹಿಂದೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಜ್ಜಿಯ ಕೊರಳಲ್ಲಿದ್ದ ಚಿನ್ನದ ಸರ ಎಳೆದೊಯ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಅಜ್ಜಿ ಹೆಣೆದ ನಾಟಕವನ್ನು ಬಯಲಿಗೆ ಎಳೆದಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ನಿವಾಸಿ ಶಾಂತ ನಾಯಕ್ ಎಂಬವರು ಜ.8 ರಂದು ಪೇಟೆಗೆ ಬಂದು ಮನೆಗೆ ಹಿಂತಿರುಗುವ ವೇಳೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕುತ್ತಿಗೆಯಲ್ಲಿದ್ದ ಮೂರು ಪವನ್ ತೂಕದ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾಗಿ ಪ್ರಕರಣ ದಾಖಲಿಸಿದ್ದರು. ಘಟನೆ ವೇಳೆ ಅಜ್ಜಿಯ ಬೆನ್ನಿಗೆ ಗಾಯವಾಗಿತ್ತು ಎನ್ನಲಾಗಿತ್ತು.
ಮನೆಗೆ ಮರಳಿದ ಅಜ್ಜಿ ಮಗಳು ಮಂಗಳೂರಿನಿಂದ ಕೆಲಸ ಮುಗಿಸಿ ಬಂದಾಗ ವಿಚಾರ ತಿಳಿಸಿದ್ದಾರೆ. ವೃದ್ದೆಯ ಮಗಳು ಬಳಿಕ ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಬಂದು ಘಟನೆ ಬಗ್ಗೆ ವಿವರಿಸಿ ಪ್ರಕರಣ ದಾಖಲು ಮಾಡಿದ್ದರು.
ಘಟನೆಯನ್ನು ಗಂಭೀರ ಪ್ರಕರಣವೆಂದು ಪರಿಗಣಿಸಿದ ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್ಐ ಅವಿನಾಶ್ ಹಾಗೂ ಅಪರಾಧ ವಿಭಾಗದ ಎಸ್.ಐ ಕಲೈಮಾರ್ ನೇತೃತ್ವದಲ್ಲಿ ತಂಡ ರಚಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಅಲ್ಲಿನ ಸಿ.ಸಿ. ಕ್ಯಾಮರಾ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಾರೆ.

ಆದರೆ ಘಟನೆ ನಡೆದ ದಿನ ದೂರು ನೀಡಿದ ಅಜ್ಜಿ ತೆರಳಿದ್ದ ರಸ್ತೆಯಲ್ಲಿ ಅಂತಹ ಯಾವುದೇ ಘಟನೆ ನಡೆದ ಬಗ್ಗೆ ಸುಳಿವು ಸಿಗಲಿಲ್ಲ. ಪೊಲೀಸರು ಬಳಿಕ ಅಜ್ಜಿಯ ವಿಚಾರಣೆಗೆ ಮುಂದಾಗುತ್ತಾರೆ. ಈ ವೇಳೆ ಅಜ್ಜಿ ತಪ್ಪು ಒಪ್ಪಿಕೊಂಡಿದ್ದು ನಡೆದ ವಿಚಾರವನ್ನು ಬಾಯಿಬಿಡುತ್ತಾರೆ.
ದರೋಡೆ ನಾಟಕ ಹೆಣೆದಿದ್ದು ಯಾಕೆ ?
ಅಜ್ಜಿ ತನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಯಾವುದೋ ಉದ್ದೇಶದಿಂದ ಸಂಬಂಧಿಕರಿಗೆ ನೀಡಿದ್ದರು. ಬಳಿಕ ಮಗಳು ಬೈಯುತ್ತಾಳೆ ಎಂಬ ಕಾರಣಕ್ಕೆ ಬೆನ್ನಿಗೆ ಪರಚಿದ ರೀತಿಯಲ್ಲಿ ಗಾಯ ಮಾಡಿಕೊಂಡು ದರೋಡೆ ನಾಟಕ ಹೆಣೆದಿದ್ದರು.
ಸಾಕಷ್ಟು ತಲೆನೋವಿಗೆ ಕಾರಣವಾಗಿದ್ದ ಪ್ರಕರಣವನ್ನು ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದ ತಂಡ ಚಾಕಚಕ್ಯತೆಯಿಂದ ಪತ್ತೆ ಮಾಡಿದ್ದು ಸುಳ್ಳು ಹೇಳಿ ಪೊಲೀಸರನ್ನು ಯಾಮಾರಿಸಿದ ಅಜ್ಜಿಯ ಮೇಲೆ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೆ ಪತ್ರ ಬರೆದಿದ್ದಾರೆ.
Grandmother was taken to custody of the Bantwal Police after she tried to deceive the police personals in the name of Chain Snatching.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm