ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm