ಬ್ರೇಕಿಂಗ್ ನ್ಯೂಸ್
16-01-21 06:00 pm Mangalore Correspondent ಕರಾವಳಿ
ಮಂಗಳೂರು, ಜ.16 : ಖಾಸಗಿ ಬಸ್ನಲ್ಲಿ ಯುವತಿಗೆ ಸಹ ಪ್ರಯಾಣಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ಕುರಿತು ಜಾಲತಾಣದಲ್ಲಿ ಯುವತಿ ಪೋಸ್ಟ್ ಹಂಚಿಕೊಂಡಿದ್ದು ಬಳಿಕ ಅವರನ್ನು ಸಂಪರ್ಕಿಸಲಾಯಿತು. ಯುವತಿಯೇ ಉಳ್ಳಾಲ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಒಂದು ವೇಳೆ ಯುವತಿ ದೂರು ನೀಡದಿದ್ದಲ್ಲಿ ಸ್ವಯಂಪ್ರೇರಿತ ದೂರನ್ನು ಪೊಲೀಸರೇ ದಾಖಲಿಸುತ್ತಿದ್ದರು ಎಂದು ಹೇಳಿದರು.
ಶೀಘ್ರದಲ್ಲೇ ಈ ಬಗ್ಗೆ ಬಸ್ ಮಾಲಕರ ಸಭೆ ಕರೆದು ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಲು ಡಿಸಿಪಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಸ್ಗಳಲ್ಲಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಸ್ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಇಂತಹ ಘಟನೆಗಳನ್ನು ತಡೆಗಟ್ಟಬಹುದು. ಅಲ್ಲದೆ, ಮಹಿಳಾ ತಂಡವೊಂದನ್ನು ರಚಿಸಿ, ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲು ಚಿಂತಿಸಿದ್ದೇವೆ. ಶೀಘ್ರದಲ್ಲಿಯೇ ಈ ಕಾರ್ಯಾಚರಣೆ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.
ಜ.14ರಂದು ಅಪರಾಹ್ನ 3:45ರ ಸುಮಾರಿಗೆ ಯುವತಿಯೊಬ್ಬರು ಖಾಸಗಿ ಬಸ್ನಲ್ಲಿ ದೇರಳಕಟ್ಟೆಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದರು. ಈ ವೇಳೆ ಯುವತಿ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬ ಆಕೆಯ ದೇಹ ಸ್ಪರ್ಶಿಸಿ ಕಿರುಕುಳ ನೀಡಿದ್ದ. ಈ ಬಗ್ಗೆ ಯುವತಿ ಇನ್ಸ್ಟಾಗ್ರಾಂನಲ್ಲಿ ಘಟನೆಯ ವಿವರ ಹಂಚಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶೀಘ್ರದಲ್ಲಿ ಪತ್ತೆಹಚ್ಚಿ, ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆ ಯಾವುದೇ ಭಾಗದಲ್ಲಿ ನಡೆದರೂ 112 ನಂಬರ್ಗೆ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದರು.
Mangalore city police commissioner announced special team to investigate sexual harassment case in private bus
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm