ಬ್ರೇಕಿಂಗ್ ನ್ಯೂಸ್
17-01-21 06:08 pm Mangalore Correspondent ಕರಾವಳಿ
ಪುತ್ತೂರು, ಜ.17: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ಸ್ಪರ್ಷಗೊಂಡು ಕೂಲಿಕಾರ್ಮಿಕರೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ನಡೆದಿದೆ.
ಪೆರ್ಲಂಪಾಡಿ ಗ್ರಾಮದ ಏಣಿತಡ್ಕ ನಿವಾಸಿ ಕೃಷಿ ಕೂಲಿ ಕಾರ್ಮಿಕ ಅಶ್ರಫ್ ಅಲಿ (51) ಮೃತಪಟ್ಟ ವ್ಯಕ್ತಿ. ಅಶ್ರಫ್ ಅವರು ಉಜ್ರುಪಾದೆ ನಿವಾಸಿ ಗಣೇಶ್ ಎಂಬವರ ತೋಟದಲ್ಲಿ ಕರಿಮೆಣಸು ಕೊಯ್ಯಲೆಂದು ಅಲ್ಯುಮೀನಿಯಂ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ತೋಟದ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಷಗೊಂಡು ವಿದ್ಯುತ್ ಪ್ರವಹಿಸಿ ಅಶ್ರಫ್ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೂಲತ: ಕೇರಳ ನಿವಾಸಿಯಾಗಿರುವ ಅಶ್ರಫ್ ಅವರು ಪೆರ್ಲಂಪಾಡಿಯಿಂದ ವಿವಾಹವಾಗಿ ಮಾವನ ಮನೆಯಲ್ಲಿಯೇ ವಾಸವಾಗಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A farmer died after he was electrocuted in his land at Puttur. The sampya police have registered the case.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am