ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm