ಬ್ರೇಕಿಂಗ್ ನ್ಯೂಸ್
18-01-21 04:50 pm Mangalore Correspondent ಕರಾವಳಿ
ಉಳ್ಳಾಲ, ಜ. 18: ಸೋಮೇಶ್ವರ ಕಡಲ ತೀರದಲ್ಲಿ ಕಡಲು ಪಾಲಾಗುತ್ತಿದ್ದ ಅನೇಕ ಪ್ರವಾಸಿಗರನ್ನು ಜೀವದ ಹಂಗು ತೊರೆದು ರಕ್ಷಿಸುತ್ತಿರುವ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ಸರಕಾರವು ಗುರುತಿಸಿ, ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಾಯಿ ಪರಿವಾರ್ ಟ್ರಸ್ಟ್ ಮಾರ್ಗದರ್ಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಣದ ಹಂಗು ತೊರೆದು ಪ್ರವಾಸಿಗರ ಪ್ರಾಣ ರಕ್ಷಣೆ ಮಾಡುವ ಸೇವೆಯನ್ನು ಮಾಡುತ್ತಾ ಬಂದಿರುವ ಅಶೋಕ್ ಸೋಮೇಶ್ವರ ಅವರ ಕಾರ್ಯ ಶ್ಲಾಘನೀಯ. ಸರಕಾರಿ ಸಂಬಳವಿಲ್ಲದಿದ್ದರೂ ಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ಅಶೋಕ್ ಅವರನ್ನು ಸರಕಾರ ಗುರುತಿಸುವ ಅಗತ್ಯವಿದೆ. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದರು.

ಸನ್ಮಾನ ಸ್ವೀಕರಿಸಿದ ಅಶೋಕ್ ಸೋಮೇಶ್ವರ ಮಾತನಾಡಿ ಸೇವೆಯಲ್ಲಿ ಯಾವುದೇ ಫಲಾಪೇಕ್ಷೆ ಇರಬಾರದು. ಫಲಾಪೇಕ್ಷೆ ಬಯಸಿದವ ಸೇವಕನಾಗಲು ಸಾಧ್ಯವಿಲ್ಲ. ಅನೇಕ ವೇದಿಕೆಗಳಲ್ಲಿ ಸನ್ಮಾನ ಪಡೆದಿದ್ದರೂ ಕಡಲ ತೀರದಲ್ಲೇ ಪಡೆದ ಈ ಸನ್ಮಾನ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದರು.
ಅಡ್ಕ ಭಗವತಿ ಕ್ಷೇತ್ರದ ಅರ್ಚಕ ವಸಂತ್ ಉಚ್ಚಿಲ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್. ಕುಂಪಲ, ಪುರುಷೋತ್ತಮ್ ಕಲ್ಲಾಪು, ಶವಿತ್ ಉಚ್ಚಿಲ್, ಕಲಾವಿದ ಜೆ.ಪಿ ಆಚಾರ್ಯ, ಸತೀಶ್ ಭಟ್ನಗರ, ರವಿಶಂಕರ್ ಸೋಮೇಶ್ವರ, ರಮೇಶ್ ಕೊಂಡಾಣ, ಜಯಂತ್ ಕಾಪಿಕಾಡ್, ಕಿಶೋರ್ ಮಂಚಿ, ವಿಶ್ವನಾಥ್ ಮಂಚಿ, ಸೂರ್ಯ ಕುಂಪಲ, ಪ್ರವೀಣ್ ಮೆಸ್ಕಾಂ, ಸುಖೇಶ್ ಉಚ್ಚಿಲ್ ಮೊದಲಾದವರು ಇದ್ದರು.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm