ಬ್ರೇಕಿಂಗ್ ನ್ಯೂಸ್
18-01-21 04:50 pm Mangalore Correspondent ಕರಾವಳಿ
ಉಳ್ಳಾಲ, ಜ. 18: ಸೋಮೇಶ್ವರ ಕಡಲ ತೀರದಲ್ಲಿ ಕಡಲು ಪಾಲಾಗುತ್ತಿದ್ದ ಅನೇಕ ಪ್ರವಾಸಿಗರನ್ನು ಜೀವದ ಹಂಗು ತೊರೆದು ರಕ್ಷಿಸುತ್ತಿರುವ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ಸರಕಾರವು ಗುರುತಿಸಿ, ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಾಯಿ ಪರಿವಾರ್ ಟ್ರಸ್ಟ್ ಮಾರ್ಗದರ್ಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಣದ ಹಂಗು ತೊರೆದು ಪ್ರವಾಸಿಗರ ಪ್ರಾಣ ರಕ್ಷಣೆ ಮಾಡುವ ಸೇವೆಯನ್ನು ಮಾಡುತ್ತಾ ಬಂದಿರುವ ಅಶೋಕ್ ಸೋಮೇಶ್ವರ ಅವರ ಕಾರ್ಯ ಶ್ಲಾಘನೀಯ. ಸರಕಾರಿ ಸಂಬಳವಿಲ್ಲದಿದ್ದರೂ ಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ಅಶೋಕ್ ಅವರನ್ನು ಸರಕಾರ ಗುರುತಿಸುವ ಅಗತ್ಯವಿದೆ. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದರು.
ಸನ್ಮಾನ ಸ್ವೀಕರಿಸಿದ ಅಶೋಕ್ ಸೋಮೇಶ್ವರ ಮಾತನಾಡಿ ಸೇವೆಯಲ್ಲಿ ಯಾವುದೇ ಫಲಾಪೇಕ್ಷೆ ಇರಬಾರದು. ಫಲಾಪೇಕ್ಷೆ ಬಯಸಿದವ ಸೇವಕನಾಗಲು ಸಾಧ್ಯವಿಲ್ಲ. ಅನೇಕ ವೇದಿಕೆಗಳಲ್ಲಿ ಸನ್ಮಾನ ಪಡೆದಿದ್ದರೂ ಕಡಲ ತೀರದಲ್ಲೇ ಪಡೆದ ಈ ಸನ್ಮಾನ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದರು.
ಅಡ್ಕ ಭಗವತಿ ಕ್ಷೇತ್ರದ ಅರ್ಚಕ ವಸಂತ್ ಉಚ್ಚಿಲ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್. ಕುಂಪಲ, ಪುರುಷೋತ್ತಮ್ ಕಲ್ಲಾಪು, ಶವಿತ್ ಉಚ್ಚಿಲ್, ಕಲಾವಿದ ಜೆ.ಪಿ ಆಚಾರ್ಯ, ಸತೀಶ್ ಭಟ್ನಗರ, ರವಿಶಂಕರ್ ಸೋಮೇಶ್ವರ, ರಮೇಶ್ ಕೊಂಡಾಣ, ಜಯಂತ್ ಕಾಪಿಕಾಡ್, ಕಿಶೋರ್ ಮಂಚಿ, ವಿಶ್ವನಾಥ್ ಮಂಚಿ, ಸೂರ್ಯ ಕುಂಪಲ, ಪ್ರವೀಣ್ ಮೆಸ್ಕಾಂ, ಸುಖೇಶ್ ಉಚ್ಚಿಲ್ ಮೊದಲಾದವರು ಇದ್ದರು.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm