ಬ್ರೇಕಿಂಗ್ ನ್ಯೂಸ್
18-01-21 04:50 pm Mangalore Correspondent ಕರಾವಳಿ
ಉಳ್ಳಾಲ, ಜ. 18: ಸೋಮೇಶ್ವರ ಕಡಲ ತೀರದಲ್ಲಿ ಕಡಲು ಪಾಲಾಗುತ್ತಿದ್ದ ಅನೇಕ ಪ್ರವಾಸಿಗರನ್ನು ಜೀವದ ಹಂಗು ತೊರೆದು ರಕ್ಷಿಸುತ್ತಿರುವ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ಸರಕಾರವು ಗುರುತಿಸಿ, ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಾಯಿ ಪರಿವಾರ್ ಟ್ರಸ್ಟ್ ಮಾರ್ಗದರ್ಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಣದ ಹಂಗು ತೊರೆದು ಪ್ರವಾಸಿಗರ ಪ್ರಾಣ ರಕ್ಷಣೆ ಮಾಡುವ ಸೇವೆಯನ್ನು ಮಾಡುತ್ತಾ ಬಂದಿರುವ ಅಶೋಕ್ ಸೋಮೇಶ್ವರ ಅವರ ಕಾರ್ಯ ಶ್ಲಾಘನೀಯ. ಸರಕಾರಿ ಸಂಬಳವಿಲ್ಲದಿದ್ದರೂ ಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ಅಶೋಕ್ ಅವರನ್ನು ಸರಕಾರ ಗುರುತಿಸುವ ಅಗತ್ಯವಿದೆ. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದರು.

ಸನ್ಮಾನ ಸ್ವೀಕರಿಸಿದ ಅಶೋಕ್ ಸೋಮೇಶ್ವರ ಮಾತನಾಡಿ ಸೇವೆಯಲ್ಲಿ ಯಾವುದೇ ಫಲಾಪೇಕ್ಷೆ ಇರಬಾರದು. ಫಲಾಪೇಕ್ಷೆ ಬಯಸಿದವ ಸೇವಕನಾಗಲು ಸಾಧ್ಯವಿಲ್ಲ. ಅನೇಕ ವೇದಿಕೆಗಳಲ್ಲಿ ಸನ್ಮಾನ ಪಡೆದಿದ್ದರೂ ಕಡಲ ತೀರದಲ್ಲೇ ಪಡೆದ ಈ ಸನ್ಮಾನ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದರು.
ಅಡ್ಕ ಭಗವತಿ ಕ್ಷೇತ್ರದ ಅರ್ಚಕ ವಸಂತ್ ಉಚ್ಚಿಲ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್. ಕುಂಪಲ, ಪುರುಷೋತ್ತಮ್ ಕಲ್ಲಾಪು, ಶವಿತ್ ಉಚ್ಚಿಲ್, ಕಲಾವಿದ ಜೆ.ಪಿ ಆಚಾರ್ಯ, ಸತೀಶ್ ಭಟ್ನಗರ, ರವಿಶಂಕರ್ ಸೋಮೇಶ್ವರ, ರಮೇಶ್ ಕೊಂಡಾಣ, ಜಯಂತ್ ಕಾಪಿಕಾಡ್, ಕಿಶೋರ್ ಮಂಚಿ, ವಿಶ್ವನಾಥ್ ಮಂಚಿ, ಸೂರ್ಯ ಕುಂಪಲ, ಪ್ರವೀಣ್ ಮೆಸ್ಕಾಂ, ಸುಖೇಶ್ ಉಚ್ಚಿಲ್ ಮೊದಲಾದವರು ಇದ್ದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm