ಬ್ರೇಕಿಂಗ್ ನ್ಯೂಸ್
18-01-21 06:39 pm Mangalore Correspondent ಕರಾವಳಿ
ಮಂಗಳೂರು, ಜ.18: ಆರು ತಿಂಗಳ ಹಿಂದೆ ಕೇಂದ್ರ ಗುಪ್ತಚರ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದ್ದ ಸ್ಯಾಟಲೈಟ್ ಫೋನ್ ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.
ಗುಪ್ತಚರ ಅಧಿಕಾರಿಗಳು, ಸ್ಥಳೀಯ ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಬಳಿಕ ಕಳೆದ ಆರು ತಿಂಗಳಿಂದಲೂ ಸ್ಯಾಟಲೈಟ್ ಫೋನ್ ಗಳು ಸೈಲೆಂಟಾಗಿದ್ದವು. ಇದೀಗ ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ ಸ್ಯಾಟ್ ಲೈಟ್ ಫೋನ್ ರಿಂಗಣಿಸಿದೆ. ಕಳೆದ 10 ದಿನಗಳಲ್ಲಿ ಮೂರು ಬಾರಿ ಆಕ್ಟಿವ್ ಆಗಿದ್ದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಫೋನ್ ಸಕ್ರಿಯವಾಗಿರುವ ಬಗ್ಗೆ ಲೊಕೇಷನ್ ಟ್ರೇಸ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನಕಮಜಲು ಎಂಬಲ್ಲಿ ಲೊಕೇಶನ್ ಕಂಡುಬಂದಿದ್ದು ಆ ಜಾಗದಲ್ಲಿ ಯಾರೋ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಗುಪ್ತಚರ ಏಜೆನ್ಸಿ 'ರಾ' ಸಂಸ್ಥೆಯ ಅಧಿಕಾರಿಗಳು ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆಗಿರುವುದನ್ನು ಪತ್ತೆ ಮಾಡಿ ರಾಜ್ಯ ಗುಪ್ತಚರ ಇಲಾಖೆಗೆ ಸಂದೇಶ ರವಾನಿಸಿದ್ದಾರೆ.
ಭಾರತದಲ್ಲಿ ನಿಷೇಧಿಸಲಾಗಿರುವ ತುರಾಯಾ ಸ್ಯಾಟಲೈಟ್ ಫೋನ್ ನಿಂದ ನಿಗೂಢ ವ್ಯಕ್ತಿಗಳ ಜೊತೆ ಸಂಪರ್ಕ ಸಾಧಿಸಿದ್ದನ್ನು ಪತ್ತೆ ಮಾಡಲಾಗಿದೆ. ಕೇಂದ್ರ ಇಂಟೆಲಿಜೆನ್ಸ್ ಅಧಿಕಾರಿಗಳ ಸೂಚನೆಯಂತೆ ರಾಜ್ಯ ಗುಪ್ತಚರ ಇಲಾಖೆಯಿಂದ ಈಗ ತನಿಖೆ ಆರಂಭಿಸಲಾಗಿದೆ. ಸ್ಯಾಟಲೈಟ್ ಫೋನ್ ಗಳನ್ನು ನಿಷೇಧಿಸಿರುವುದರಿಂದ ಉಗ್ರವಾದಿ ಚಟುವಟಿಕೆ ನಿರತರು ಈ ಫೋನ್ ಬಳಕೆ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಸದ್ದಿಲ್ಲದ ರೀತಿ ಕರಾವಳಿಯ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ಮೂಡುತ್ತಿದೆ.
ಒಂದು ವರ್ಷದ ಹಿಂದೆ ಧರ್ಮಸ್ಥಳ ಬಳಿ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಗುಪ್ತಚರ ಅಧಿಕಾರಿಗಳು ಅಲ್ಲಿಗೆ ತೆರಳಿ, ತನಿಖೆ ಕೈಗೊಂಡಿದ್ದರು. ಆದರೆ, ಯಾವುದೇ ಮಾಹಿತಿ ಪೊಲೀಸರಿಗೆ ಲಭಿಸಿರಲಿಲ್ಲ. ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆದರೂ ಅದನ್ನು ಪತ್ತೆ ಮಾಡಲು ಸಾಧ್ಯವಾಗದಿರುವುದು ಪೊಲೀಸರ ತಲೆನೋವಿಗೆ ಕಾರಣವಾಗಿತ್ತು. ಇದೀಗ ಮತ್ತೆ ಅಂಥದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು ಪೊಲೀಸರ ನಿದ್ದೆಗೆಡಿಸಿದೆ.
Satellite phones activate once again In Mangalore and coastal areas Inform I sources to inform high sources.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangalore Correspondent
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm