ಬ್ರೇಕಿಂಗ್ ನ್ಯೂಸ್
19-01-21 05:31 pm Mangalore Correspondent ಕರಾವಳಿ
ಮಂಗಳೂರು, ಜ.19: ಈ ಹೆಣ್ಮಗಳಿಗೆ ಸಣ್ಣಂದಿನಿಂದಲೇ ಬೆಕ್ಕು, ನಾಯಿಗಳಂದ್ರೆ ಪಂಚಪ್ರಾಣ. ಬೀದಿಯಲ್ಲಿ ಹೋಗುವ ನಾಯಿಗಳೇ ಆದ್ರೂ ಅದನ್ನು ಮುದ್ದಿಸುತ್ತಾಳೆ. ಆಹಾರ ಕೊಡುತ್ತಾಳೆ. ಕೈಕಾಲು ಊನವಾಗಿದ್ದರೆ, ಆರೋಗ್ಯ ಸರಿ ಇಲ್ಲದಿದ್ದರೆ ತಾನೇ ಹೋಗಿ ಔಷಧಿ ನೀಡುತ್ತಾಳೆ. ಹೌದು.. ನಲ್ವತ್ತಕ್ಕೂ ಹೆಚ್ಚು ಬೆಕ್ಕು, ನಾಯಿಗಳ ಪಾಲಿಗೆ ಆಕೆಯೀಗ ಮುದ್ದಿನ ಅಮ್ಮನಾಗಿದ್ದಾಳೆ.
ಸುರತ್ಕಲ್ ಗೋವಿಂದಾಸ್ ಕಾಲೇಜಿನ ಬಳಿ ಮನೆಯನ್ನು ಹೊಂದಿರುವ ಸಾಕ್ಷಿ ಸುನಿಲ್ ಮೂಲತಃ ಕಾರ್ಕಳದವರು. ಸುನಿಲ್ ಅವರನ್ನು ಮದುವೆಯಾದ ಬಳಿಕ ಸುರತ್ಕಲ್ ನಲ್ಲಿ ಬಂದು ನೆಲೆಸಿದ್ದಾರೆ. ಐದು ವರ್ಷಗಳ ಹಿಂದೆ ಮದುವೆಯಾಗಿದ್ದರಂತೆ. ಮದುವೆಗೂ ಮೊದಲೇ ಆಕೆಗೆ ಬೆಕ್ಕು, ನಾಯಿಗಳನ್ನು ಸಾಕುವುದು, ಬೀದಿ ನಾಯಿಗಳಿಗೆ ಆಹಾರ ಕೊಡುವುದು ಹವ್ಯಾಸ ಆಗಿತ್ತು. ಮದುವೆಯಾದ ಬಳಿಕವೂ ತಮ್ಮ ಮನೆಯನ್ನು ಬೆಕ್ಕು, ನಾಯಿಗಳು ಜೊತೆಯಾಗಿ ಬದುಕುವಂತೆ ರೂಪಿಸಿಕೊಂಡಿದ್ದಾರೆ. 12 ವರ್ಷಗಳಿಂದ ನಿರಂತರವಾಗಿ ಹೀಗೆ ಬೆಕ್ಕು, ನಾಯಿಗಳ ಜೊತೆಗೇ ಬದುಕುತ್ತಿದ್ದೇನೆ ಎನ್ನುತ್ತಾರೆ, ಸಾಕ್ಷಿ.
ಮನುಷ್ಯರಾದರೆ ಏನೇ ತೊಂದರೆಗಳಾದರೆ ಬೈತಾರೆ. ಜಗಳ ಮಾಡುತ್ತಾರೆ. ಆದರೆ, ನಾಯಿ, ಬೆಕ್ಕುಗಳು ಹಾಗಲ್ಲ. ನಾವು ಮಾಡಿದ ಉಪಕಾರವನ್ನು ಯಾವತ್ತೂ ಮರೆಯುವುದಿಲ್ಲ. ಅವಕ್ಕೆ ನಾವಲ್ಲದೆ ಬೇರೆ ಯಾರು ಆಹಾರ ಕೊಡಬೇಕು. ಹಾಗಾಗಿ ಬೀದಿಯಲ್ಲಿ ಯಾವುದೇ ತೊಂದರೆಗೆ ಒಳಗಾಗಿ ಬಿದ್ದುಕೊಂಡ ನಾಯಿ, ಬೆಕ್ಕುಗಳ ಬಗ್ಗೆ ತಿಳಿದರೆ, ಅಲ್ಲೇ ಹೋಗಿ ಔಷಧಿ ಕೊಟ್ಟು ಸಾಕುತ್ತೇನೆ ಎಂದು ಹೇಳುತ್ತಾರೆ.
ಸದ್ಯಕ್ಕೆ ನಲ್ವತ್ತಕ್ಕೂ ಹೆಚ್ಚು ಬೆಕ್ಕು, ನಾಯಿಗಳು ತನ್ನ ಮನೆಯಲ್ಲೇ ಇದೆ. ಅದಲ್ಲದೆ, ಪ್ರತಿ ದಿನ ಸುರತ್ಕಲ್ ಪರಿಸರದಲ್ಲಿ ಒಂದಷ್ಟು ಬೀದಿನಾಯಿಗಳಿಗೂ ಆಹಾರ ಕೊಡುತ್ತೇನೆ. ಕುಚ್ಚಲಕ್ಕಿಯ ಅನ್ನ ಮತ್ತು ಇತರೇ ಒಣ ಉತ್ಪನ್ನಗಳನ್ನು ತಿನ್ನಲು ಕೊಡುತ್ತೇನೆ. ತಿಂಗಳಿಗೆ ನಲ್ವತ್ತು ಕೇಜಿಯಷ್ಟು ಪೆಟ್ ಫುಡ್ ಕೂಡ ಖಾಲಿಯಾಗುತ್ತದೆ. ಖರ್ಚು ಲೆಕ್ಕ ಹಾಕಿದರೆ, ಸುಮಾರು 12 ಸಾವಿರ ತಿಂಗಳಿಗೆ ಬೇಕಾಗುತ್ತದೆ ಎನ್ನುತ್ತಾರೆ.
ಸಿಟಿಯಲ್ಲಿರುವ ಕೆಲವು ಮಂದಿ ಬೆಕ್ಕು, ನಾಯಿಗಳಂದ್ರೆ ತುಂಬ ಇಷ್ಟ ಪಡುತ್ತಾರೆ. ಅವನ್ನು ಮನೆಯೊಳಗೇ ಸಾಕುತ್ತಾರೆ. ಆದರೆ, ಒಂದೆರಡು ಅಷ್ಟೇ ಇರುತ್ತದೆ. ಆದರೆ, ಸಾಕ್ಷಿ ಅವರದ್ದು ಇದು ಹವ್ಯಾಸ ಅಷ್ಟೇ ಅಲ್ಲ ಕಾಳಜಿಯಾಗಿದೆ. ಬೀದಿ ನಾಯಿಗಳು ಗಾಯಗೊಂಡಿರುವ ಬಗ್ಗೆ ಹೇಳಿದರೆ, ಅದು ಇದ್ದಲ್ಲಿಗೇ ಬಂದು ಔಷಧಿ ಕೊಡುತ್ತಿದ್ದಾರೆ. ಬಾಯಿ ಬಾರದ ಪ್ರಾಣಿಗಳ ವೇದನೆಯನ್ನು ಅರಿತು ಸಲಹುತ್ತಾರೆ. ನಿಜಕ್ಕೂ ಸಾಕ್ಷಿ ಸುನಿಲ್ ಅವರ ಮಾನವೀಯ ಕಾಳಜಿಯ ಸೇವೆ ಅಪರೂಪದಲ್ಲಿ ಅಪರೂಪ ಎನ್ನಬೇಕಷ್ಟೆ.
Photo Gallery: ಆಕೆಯೀಗ ಬೀದಿಯಲ್ಲಿ ಅಲೆಯುವ ಬೆಕ್ಕು, ನಾಯಿಗಳ ಪಾಲಿಗೆ ಮುದ್ದಿನ ಅಮ್ಮ..!!
Sakshi Sunil Kamath from Surathkal, Mangalore turns as an angel as she provides shelter to stray dogs and kittens at her home since 12 long years maintaining them with her own expense.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm