ಬ್ರೇಕಿಂಗ್ ನ್ಯೂಸ್
19-01-21 10:42 pm Mangaluru Correspondent ಕರಾವಳಿ
ಉಳ್ಳಾಲ, ಜ.19: ಉಳ್ಳಾಲ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡಮ್ ಗಳನ್ನು ಹಾಕಿದ್ದಲ್ಲದೆ, ಸಿಎಂ ಬಿಎಸ್ವೈ ಮತ್ತು ಅವರ ಪುತ್ರ ವಿಜಯೇಂದ್ರ ಭಾವಚಿತ್ರಕ್ಕೆ ಶಿಲುಬೆಯಾಕೃತಿ ಚಿತ್ರ ಬಿಡಿಸಿ, ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ಅವಹೇಳನಕಾರಿ ಬರಹ ಬರೆದ ವಿಕೃತಿ ಕಂಡುಬಂದಿದೆ.
ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತೀ ತಿಂಗಳ ಸಂಕ್ರಾತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಇಟ್ಟಿದ್ದಾರೆ. ಈ ಬಾರಿ ಸ್ವಲ್ಪ ತಡವಾಗಿ ಇಂದು ಸಂಜೆ ಕಾಣಿಕೆ ಡಬ್ಬಿ ತೆರೆದಿದ್ದು ಡಬ್ಬಿಯ ಒಳಗೆ ಕಾಂಡೋಮ್ ಗಳು ಮತ್ತು ಪ್ರಚೋದನಕಾರಿ ಬರಹಗಳಿದ್ದ ಪ್ಲೆಕ್ಸ್ ಒಂದು ಲಭಿಸಿದೆ.

ಬೆಂಗಳೂರಿನ K.R.I.D .L ನಿಗಮ ಅಧ್ಯಕ್ಷ ಎಂ.ರುದ್ರೇಶ್ ಅವರಿಗೆ ಶುಭಕೋರಿದ ಪ್ಲೆಕ್ಸ್ ಇದಾಗಿದ್ದು ಫ್ಲೆಕ್ಸಲ್ಲಿರುವ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಅಮಿತ್ ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಸೇರಿದಂತೆ ಅನೇಕ ಬಿಜೆಪಿ ನಾಯಕರ ಭಾವ ಚಿತ್ರಗಳಿದ್ದು ಎಲ್ಲವನ್ನು ಗೀಚಿ ಕುರೂಪಗೊಳಿಸಲಾಗಿದೆ. ಬಿ.ಎಸ್.ವೈ ಮತ್ತು ಅವರ ಪುತ್ರ ವಿಜಯೇಂದ್ರ ಫೋಟೊದ ಕತ್ತಲ್ಲಿ ಶಿಲುಬೆಯ ಹಾರದ ಚಿತ್ರ ಬಿಡಿಸಲಾಗಿದೆ.
ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು..!
ದೇವಲೋಕದಿಂದ ಹೊರಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು ವಿಗ್ರಹಗಳ ಮೂಲಕ ಭೂಲೋಕದ ಜನರನ್ನು ಭ್ರಷ್ಟರನ್ನಾಗಿಸಿ ನಕಲಿ ದೇವರಾಗಿ ಅನಾದಿ ಕಾಲದಿಂದ ಮೆರೆಯಲ್ಪಡುತ್ತಿವೆ, ಎಚ್ಚರ.
ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ ,ಬಾಚಿ ತಿಂದು ತೇಗುವ ಈ ಹಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹೊಡೆದು , ಹಿಡಿದು ಕೊಲ್ಲ ಬೇಕಾಗಿದೆ. ಜನರು ಸಿದ್ಧರಾಗಬೇಕು ಎಂದು ಪ್ಲೆಕ್ಸಲ್ಲಿ ಬರೆಯಲಾಗಿದೆ.

ಕೊರಗಜ್ಜ ಸೇವಾ ಸಮಿತಿಯವರು ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಮಂಗಳೂರು ನಗರದ ಕೊಟ್ಟಾರದ ಬಬ್ಬುಸ್ವಾಮಿ ಮತ್ತು ಅತ್ತಾವರದ ಬಾಬುಗುಡ್ಡೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯಲ್ಲೂ ಇದೇ ರೀತಿಯ ಅವಹೇಳನ ಬರಹದ ಪತ್ರ ಮತ್ತು ಕಾಂಡೋಮ್ ಕಂಡುಬಂದಿತ್ತು.
Also Read: ಹಿಂದುಗಳನ್ನು ನಿಂದಿಸಿ ಬರಹ ; ಕಾಣಿಕೆ ಡಬ್ಬಿಯಲ್ಲಿ ಕಿಡಿಗೇಡಿ ಕೃತ್ಯ
Hate message towards Karnataka cm BSY and son with condoms found in Koragajja Temple offering box in Ullal. The same was found a couple of days with fake curreny notes in Attavar Temple.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm