ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am