ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am