ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm